‘ಕಳೆದ ಲೋಕಸಭಾ ಚುನಾವಣೆ ನನಗೆ ಸಾಕಷ್ಟು ಪಾಠ ಕಲಿಸಿದೆ. ರಾಜಕೀಯದ ಮೊದಲ ಹೆಜ್ಜೆಯಲ್ಲೇ ದೊಡ್ಡ ಪಾಠವಾಗಿದೆ. ಷಡ್ಯಂತ್ರದಿಂದ ನಾನು ಸೋತಿರಬಹುದು, ಆದರೆ ಜನರು ನನಗೆ ಮೋಸ ಮಾಡಿಲ್ಲ. ನನ್ನ ಮನಸ್ಸಿನಲ್ಲಿ ಸೋಲಿನ ನೋವಿಲ್ಲ. ಸಮ್ಮಿಶ್ರ ಸರ್ಕಾರ ಮಂಡ್ಯ ಜಿಲ್ಲೆಗೆ ನೀಡಿದ್ದ ಅನುದಾನವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಡೆ ಹಿಡಿದಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಮತ ಕೇಳಲು ಅವರು ನೈತಿಕತೆ ಉಳಿಸಿಕೊಂಡಿಲ್ಲ’ ಎಂದರು.