ಒಂದು ವೇಳೆ ಸೋಂಕಿತರ ಪ್ರಮಾಣ ಇನ್ನೂ ಹೆಚ್ಚಿ, ಸಾರ್ವಜನಿಕ ಸಮಾರಂಭಗಳ ಮೇಲೆ ನಿಷೇಧ ಹೇರುವಂತಹ ಪರಿಸ್ಥಿತಿ ಬಂದಲ್ಲಿ ಮದುವೆಯನ್ನು ಇಲ್ಲಿಂದ ಬೆಂಗಳೂರಿಗೆ ಸ್ಥಳಾಂತರಿಸುವ ಕುರಿತು ಚರ್ಚೆ ನಡೆದಿದೆ. ಪರಿಸ್ಥಿತಿ ಕೈ ಮೀರಿದಲ್ಲಿ ಇಲ್ಲಿ ಮದುವೆ ಸಂಭ್ರಮ ಕೈಬಿಟ್ಟು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸರಳವಾಗಿ ವಿವಾಹ ನೆರವೇರಿಸುವ ಸಾಧ್ಯತೆಯೂ ಇದೆ. ಯಾವುದಕ್ಕೂ ಇನ್ನೊಂದಿಷ್ಟು ದಿನ ಕಾದು ನೋಡಲು ಕುಮಾರಸ್ವಾಮಿ ನಿರ್ಧರಿಸಿದ್ದಾರೆ.