ಚಿಂತಕರ ಚಾವಡಿಯ ಆಶ್ರಯದಲ್ಲಿ ನಗರದಲ್ಲಿ ಭಾನುವಾರ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ‘2008ರಲ್ಲಿ ಮುಂಬೈ ದಾಳಿ ಘಟಿಸಿತು. ಆಗ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಯಾವ ರೀತಿ ವರ್ತಿಸಿತು ಎಂಬುದು ಇಡೀ ದೇಶಕ್ಕೆ ಗೊತ್ತು. ಆಗಿನದ್ದು ದುರ್ಬಲ ಸರ್ಕಾರ. 2019ರಲ್ಲಿ ಪುಲ್ವಾಮಾ ಘಟನೆಯ ಬಳಿಕ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದಿಟ್ಟ ಕ್ರಮ ಕೈಗೊಂಡಿತು. ಪ್ರಬಲ ಸರ್ಕಾರ ಎಂಬುದಕ್ಕೆ ಇದೇ ಸಾಕ್ಷಿ. ಇಂತಹ ಸರ್ಕಾರ ಮತ್ತೆ ಬರಬೇಕಲ್ಲವೇ? ಅಥವಾ ದುರ್ಬಲರಿಗೆ ಮತ ಚಲಾಯಿಸುತ್ತೀರಾ’ ಎಂದು ಪ್ರಶ್ನಿಸಿದರು.