ವಿಚಾರಣೆ ವೇಳೆ ರಾಜ್ಯ ಪ್ರಾಸಿಕ್ಯೂಷನ್ ಪರ ವಕೀಲ ವಿ.ಎಸ್.ಹೆಗಡೆ ಪ್ರಕರಣಕ್ಕೆ ಸಂಬಂಧಸಿದ ತನಿಖಾ ವರದಿ ಸಲ್ಲಿಸಿ, ‘ಸದ್ಯ ವಿಚಾರಣೆ ನ್ಯಾಯಾಲಯದಲ್ಲಿ ಲೆನಿನ್ ಅವರ ಪಾಟಿಸವಾಲು ನಡೆಯುತ್ತಿದೆ. ಹೀಗಾಗಿ ಈ ಪ್ರಕ್ರಿಯೆ ಪೂರ್ಣಗೊಳ್ಳುವತನಕ ಸ್ವಾಮೀಜಿ ಹಾಜರಾತಿ ಅಗತ್ಯವಿಲ್ಲ. ಅವರಿಗೆ ಸಮನ್ಸ್ ಜಾರಿಯಾದ ನಂತರ ವಿಚಾರಣೆ ನಡೆಸುವುದು ಸೂಕ್ತ’ ಎಂದು ತಿಳಿಸಿದರು. ವಾದ- ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿ ಕುರಿತ ತೀರ್ಪುನ್ನು ಕಾಯ್ದಿರಿಸಿದೆ.