ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಸಮಾರಂಭದಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್,ಪಕ್ಷವು ಇಂದು ಒಗ್ಗಟ್ಟಿನಿಂದಿದೆ. ಎಲ್ಲ ನಾಯಕರೂ ಇಲ್ಲಿ ಒಂದುಗೂಡಿದ್ದೇವೆ. ಪಕ್ಷವನ್ನು ಒಗ್ಗಟ್ಟಿನಿಂದ ಮುಂದೆ ಸಾಗಿಸುವ ಸಾಮರ್ಥ್ಯವನ್ನು ಡಿ.ಕೆ.ಶಿವಕುಮಾರ್ ಹೊಂದಿರುವ ಕಾರಣ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಒಳ್ಳೆಯ ದಿನಗಳು ನಿಶ್ಚಿತ ಎಂದು ಅವರು ಹೇಳಿದರು.