‘ಗುರುತಿಸಲಾಗಿರುವ ಭೂಮಿಯನ್ನು ಕಂದಾಯ, ನಗರಸಭೆ, ಪಾಲಿಕೆ ಅಥವಾ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಹಸ್ತಾಂತರ ಮಾಡುವ ಪ್ರಕ್ರಿಯೆ ಕ್ಷಿಪ್ರಗತಿಯಲ್ಲಿ ನಡೆಯಬೇಕು.ರುದ್ರಭೂಮಿಗಾಗಿ ಅಗತ್ಯವಿರುವ ನಿವೇಶನವನ್ನು ಆದ್ಯತೆ ಮೇರೆಗೆ ಮಂಜೂರು ಮಾಡಿ, ಅಲ್ಲಿ ಮೂಲಸೌಕರ್ಯಗಳನ್ನು ಒದಗಿಸಿಕೊಡಬೇಕು’ ಎಂದು ಕಂದಾಯ ಇಲಾಖೆಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ‘ಭೂ ಒಡೆತನ ಯೋಜನೆಯಡಿಯ ಪ್ರಗತಿ ಬಗ್ಗೆ ಸಂಪೂರ್ಣಮಾಹಿತಿಯನ್ನು ನೀಡಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಸೂಚಿಸಿದರು. ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಶಿವಮೂರ್ತಿ, ಜಿ.ಪಂ ಸಿಇಒ ಶಿವರಾಮೇಗೌಡ, ಅಧಿಕಾರಿಗಳು ಇದ್ದರು.