ಸಿದ್ಧಗಂಗಾ ಸ್ವಾಮೀಜಿಗಳ ಪರಮಾಪ್ತ ಬಳಗದಲ್ಲಿ ಗವಿಮಠದ ಶ್ರೀಗಳು ಅವರ ಮಾರ್ಗದರ್ಶನದಲ್ಲಿಯೇ ಎಲ್ಲ ಕಾರ್ಯಕ್ರಮಗಳನ್ನು ಮಾಡುತ್ತಿದ್ದರು. ಮಂಗಳವಾರ ನಡೆಯಲಿರುವ ಮಹಾರಥೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೋ, ಇಲ್ಲವೋ ಎಂಬ ಗೊಂದಲ ಏರ್ಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಗವಿಮಠದ ಶ್ರೀಗಳು ಜಾತ್ರೆ ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆಯಿಲ್ಲ. ಗುರುಗಳನ್ನು ಸ್ಮರಣೆ ಮಾಡುವ ಮೂಲಕ ಕಾರ್ಯಕ್ರಮ ಆರಂಭವಾಗಲಿವೆ ಎಂದು ಹೇಳಿದರು.