'ಕೊರೊನಾ ನಿಯಂತ್ರಣ, ಪರಿಸ್ಥಿತಿ ನಿರ್ವಹಣೆಗೆ ಸರ್ಕಾರದ ಕ್ರಮಗಳು ವಿಶ್ವ ಆರೋಗ್ಯ ಸಂಸ್ಥೆಯ ನಿಯಮಗಳಿಗೆ, ಮಾರ್ಗಸೂಚಿಗಳಿಗೆ ಅನುಗುಣವಾಗಿ ಇರಬೇಕೇ ಹೊರತು ಸರಕಾರದ ಪ್ರತಿನಿಧಿಗಳ, ಯಾವುದೋ ರಾಜಕೀಯ ಪಕ್ಷದ ತತ್ವ, ಸಿದ್ಧಾಂತ, ರಾಜಕೀಯ ಲಾಭಕ್ಕೆ ಬಳಕೆ ಆಗಬಾರದು. ಕೊರೊನಾ ಇಡೀ ರಾಜ್ಯದ, ದೇಶದ, ವಿಶ್ವದ ಸಮಸ್ಯೆ. ಬರೀ ಆಡಳಿತರೂಢ ಸರ್ಕಾರದ, ಪಕ್ಷದ ಸಮಸ್ಯೆ ಅಲ್ಲ. ಇದು ಎಲ್ಲರ ಸಮಸ್ಯೆ. ಎಲ್ಲರೂ ಒಗ್ಗೂಡಿ ಹೋರಾಡಬೇಕು. ಈ ವಿಚಾರದಲ್ಲಿ ಒಬ್ಬರು ಹೆಚ್ಚು, ಒಬ್ಬರು ಕಡಿಮೆ ಎಂಬುದಿಲ್ಲ ಎಂದು ವಿವರಿಸಿದರು.