ಈ ಸಂಬಂಧ ಇಲಾಖೆಯ ಜಂಟಿ ನಿರ್ದೇಶಕ ಡಿ.ಪಿ.ಮುರಳಿಧರ್ ಮಾಹಿತಿ ನೀಡಿದ್ದು, ಇಂದಿರಾನಗರದ ಸರ್ ಸಿ.ವಿ.ರಾಮನ್ ಆಸ್ಪತ್ರೆಯಲ್ಲಿ ಮಾಧ್ಯಮದಲ್ಲಿ ಕರ್ತವ್ಯ ನಿರ್ವಹಿಸುವವರಿಗಾಗಿ ಶನಿವಾರ ತಪಾಸಣೆ ನಡೆಸಲಾಗಿತ್ತು.ಅವರಲ್ಲಿ ಗಂಟಲು ದ್ರವ ಹಾಗೂ ರಕ್ತಪರೀಕ್ಷೆಗಳನ್ನು ನಡೆಸಲಾಗಿತ್ತು. ಇವುಗಳ ವರದಿ ಬಂದಿದ್ದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.