<p><strong>ಉಡುಪಿ: </strong>ಶಂಕಿತ ಕೊರೊನಾಗೆ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದೇಶಿ ವಿದ್ಯಾರ್ಥಿ, ಶಿವಮೊಗ್ಗದ ಸಾಗರದ ಮಹಿಳೆ ಹಾಗೂ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ಕೆನಡಾದಿಂದ ಮರಳಿದ್ದ ವ್ಯಕ್ತಿಯ ಪರೀಕ್ಷಾ ವರದಿ ಬಂದಿದ್ದು, ಕೊರೊನಾ ಸೋಂಕು ಪತ್ತೆಯಾಗಿಲ್ಲ ಎಂದು ಡಿಎಚ್ಒ ಸುಧೀರ್ ಚಂದ್ರ ಸೂಡ ತಿಳಿಸಿದರು.</p>.<p>ಕೆಎಂಸಿಯಲ್ಲಿ ದಾಖಲಾಗಿರುವ ಮೂವರು ವಿದೇಶಿ ವಿದ್ಯಾರ್ಥಿಗಳ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ. ಸಾಗರದ ಮಹಿಳೆಗೆ ಮೂರು ಬಾರಿ ಪರೀಕ್ಷೆಗೊಳಪಡಿಸಿದಾಗಲೂ ಸೋಂಕು ಕಂಡುಬಂದಿಲ್ಲ ಎಂದು ಡಿಎಚ್ಒ ತಿಳಿಸಿದರು.</p>.<p>ಈಚೆಗೆ ಜರ್ಮನಿಯಿಂದ ಕಾಪುವಿಗೆ ಬಂದಿದ್ದ ವ್ಯಕ್ತಿಗೆ ಶೀತ, ಕೆಮ್ಮು ಕಾಣಿಸಿಕೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಗಂಟಲಿನ ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು ವರದಿಗಾಗಿ ಕಾಯುತ್ತಿದ್ದೇವೆ ಎಂದು ಮಾಹಿತಿ ನೀಡಿದರು.</p>.<p><strong>ಕೋವಿಡ್ನಿಂದ ಸಾವನ್ನಪ್ಪಿಲ್ಲ: ಡಿಸಿ</strong></p>.<p>ಹೂಡೆಯಲ್ಲಿ ಪಂಚಕರ್ಮ ಚಿಕಿತ್ಸೆ ಪಡೆಯುತ್ತಿದ್ದ ಪಂಜಾಬ್ನ 82 ವರ್ಷದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದು, ಕೋವಿಡ್ ಸೋಂಕು ಸಾವಿಗೆ ಕಾರಣವಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.</p>.<p>ನವೆಂಬರ್ನಿಂದ ಹೊಡೆಯಲ್ಲಿ ಪಂಚಕರ್ಮ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ ಶನಿವಾರ ಮೃತಪಟ್ಟಿದ್ದಾರೆ. ಸಾವಿನ ಕುರಿತು ಸುಳ್ಳು ಸುದ್ದಿಗಳನ್ನು ಹರಡಿದರೆಕಾನೂನು ಕ್ರಮ ಜರುಗಿಸುವುದಾಗಿ ಡಿಸಿ ಎಚ್ಚರಿಕೆ ನೀಡಿದ್ದಾರೆ.</p>.<p>ಮತ್ತೊಂದೆಡೆ, ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಮಣಿಪಾಲದಲ್ಲಿ ಓದುತ್ತಿರುವ ವಿದೇಶಿ ವಿದ್ಯಾರ್ಥಿಗಳಿಗೆ ತಾಯ್ನಾಡಿಗೆ ತೆರಳದಂತೆ ಸೂಚನೆ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಶಂಕಿತ ಕೊರೊನಾಗೆ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದೇಶಿ ವಿದ್ಯಾರ್ಥಿ, ಶಿವಮೊಗ್ಗದ ಸಾಗರದ ಮಹಿಳೆ ಹಾಗೂ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದ ಕೆನಡಾದಿಂದ ಮರಳಿದ್ದ ವ್ಯಕ್ತಿಯ ಪರೀಕ್ಷಾ ವರದಿ ಬಂದಿದ್ದು, ಕೊರೊನಾ ಸೋಂಕು ಪತ್ತೆಯಾಗಿಲ್ಲ ಎಂದು ಡಿಎಚ್ಒ ಸುಧೀರ್ ಚಂದ್ರ ಸೂಡ ತಿಳಿಸಿದರು.</p>.<p>ಕೆಎಂಸಿಯಲ್ಲಿ ದಾಖಲಾಗಿರುವ ಮೂವರು ವಿದೇಶಿ ವಿದ್ಯಾರ್ಥಿಗಳ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ. ಸಾಗರದ ಮಹಿಳೆಗೆ ಮೂರು ಬಾರಿ ಪರೀಕ್ಷೆಗೊಳಪಡಿಸಿದಾಗಲೂ ಸೋಂಕು ಕಂಡುಬಂದಿಲ್ಲ ಎಂದು ಡಿಎಚ್ಒ ತಿಳಿಸಿದರು.</p>.<p>ಈಚೆಗೆ ಜರ್ಮನಿಯಿಂದ ಕಾಪುವಿಗೆ ಬಂದಿದ್ದ ವ್ಯಕ್ತಿಗೆ ಶೀತ, ಕೆಮ್ಮು ಕಾಣಿಸಿಕೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಗಂಟಲಿನ ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು ವರದಿಗಾಗಿ ಕಾಯುತ್ತಿದ್ದೇವೆ ಎಂದು ಮಾಹಿತಿ ನೀಡಿದರು.</p>.<p><strong>ಕೋವಿಡ್ನಿಂದ ಸಾವನ್ನಪ್ಪಿಲ್ಲ: ಡಿಸಿ</strong></p>.<p>ಹೂಡೆಯಲ್ಲಿ ಪಂಚಕರ್ಮ ಚಿಕಿತ್ಸೆ ಪಡೆಯುತ್ತಿದ್ದ ಪಂಜಾಬ್ನ 82 ವರ್ಷದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದು, ಕೋವಿಡ್ ಸೋಂಕು ಸಾವಿಗೆ ಕಾರಣವಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.</p>.<p>ನವೆಂಬರ್ನಿಂದ ಹೊಡೆಯಲ್ಲಿ ಪಂಚಕರ್ಮ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ ಶನಿವಾರ ಮೃತಪಟ್ಟಿದ್ದಾರೆ. ಸಾವಿನ ಕುರಿತು ಸುಳ್ಳು ಸುದ್ದಿಗಳನ್ನು ಹರಡಿದರೆಕಾನೂನು ಕ್ರಮ ಜರುಗಿಸುವುದಾಗಿ ಡಿಸಿ ಎಚ್ಚರಿಕೆ ನೀಡಿದ್ದಾರೆ.</p>.<p>ಮತ್ತೊಂದೆಡೆ, ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಮಣಿಪಾಲದಲ್ಲಿ ಓದುತ್ತಿರುವ ವಿದೇಶಿ ವಿದ್ಯಾರ್ಥಿಗಳಿಗೆ ತಾಯ್ನಾಡಿಗೆ ತೆರಳದಂತೆ ಸೂಚನೆ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>