‘ಭಾನುವಾರ ರಾತ್ರಿ 11ಗಂಟೆ ಸುಮಾರಿಗೆ ಮುಖ್ಯ ಪೇದೆ ಮಲ್ಲಿಕಾರ್ಜುನ ಅವರು ಗಸ್ತಿನಲ್ಲಿದ್ದರು. ಈ ವೇಳೆ ಪಾಂಡುರಂಗ ಕಾಲೊನಿಯ ಕಮಾನಿನ ಬಳಿ ಜಗಳ ನಡೆಯುತ್ತಿತ್ತು. ಅದನ್ನು ಕಂಡ ಮಲ್ಲಿಕಾರ್ಜುನ ಅವರು ಜನರನ್ನು ಮನೆಗೆ ಹೋಗುವಂತೆ ಹೇಳಿದ್ದಾರೆ. ಆಗ ವೀರೇಶ್, ದೇವೇಂದ್ರ ಪೂಜಾರಿ, ಆತನ ಸಹೋದರ ಹನುಮಂತಪ್ಪ ಪೂಜಾರಿ ಹಾಗೂ ಸೋಮಶೇಖರ್ ಅವರು ಅವಾಚ್ಯ ಶಬ್ದಗಳಿಂದ ಅವರನ್ನು ನಿಂದಿಸಿದ್ದಾರೆ. ಅವರ ಸಮವಸ್ತ್ರದ ಕೊರಳ ಪಟ್ಟಿಗೆ ಕೈ ಹಾಕಿ, ಎಳೆದಾಡಿ ಹಲ್ಲೆ ನಡೆಸಿದ್ದಾರೆ. ಅದನ್ನು ತಡೆಯಲು ಹೋದ ಗೃಹರಕ್ಷಕ ದಳ ಸಿಬ್ಬಂದಿ ರಾಮಕೃಷ್ಣ ಅವರಿಗೆ ನಿಂದಿಸಿ, ಎಳೆದಾಡಿದ್ದಾರೆ’ ಎಂದು ಡಿವೈಎಸ್ಪಿ ಕೆ. ಶಿವಾರೆಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದರು.