<p><strong>ಬೆಂಗಳೂರು:</strong> ಸರ್ಕಾರಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡುವ ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಮುಂದಿನ ವರ್ಷದಿಂದ ಶಾಶ್ವತವಾಗಿ ರದ್ದಾಗುವ ಸಾಧ್ಯತೆ ಇದೆ.</p>.<p>‘ರಾಜ್ಯ ಸರ್ಕಾರ ತೀವ್ರ ಆರ್ಥಿಕ ಸಂಕಷ್ಟದಲ್ಲಿದೆ. ಉಚಿತ ಲ್ಯಾಪ್ಟಾಪ್ಗೆ ಸುಮಾರು ₹ 280 ಕೋಟಿಯನ್ನು ಪ್ರತ್ಯೇಕವಾಗಿ ತೆಗೆದಿರಿಸಬೇಕಾಗುತ್ತದೆ. ಇದಕ್ಕೆ ಹಣಕಾಸು ಇಲಾಖೆಯ ತೀವ್ರ ಆಕ್ಷೇಪ ಇದೆ. ಹೀಗಾಗಿ ಮುಂದಿನ ವರ್ಷದಿಂದ ಯೋಜನೆ ಕೈಬಿಡುವ ಸ್ಥಿತಿ ಬರಬಹುದು’ ಎಂದು ಕಾಲೇಜು ಶಿಕ್ಷಣ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.</p>.<p>‘ಕಳೆದ ವರ್ಷವೇ ತೀವ್ರ ಆಕ್ಷೇಪ ಇತ್ತು. ಆದರೂ ಎರಡು ವರ್ಷದಿಂದ ಸ್ಥಗಿತವಾಗಿದ್ದ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗಿದೆ. 1.09 ಲಕ್ಷ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ನೀಡಲಾಗುತ್ತಿದೆ. ಈ ಬಾರಿ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿರುವುದರಿಂದ 2020–21ನೇ ಸಾಲಿಗೆ ಹಣಕಾಸು ಇಲಾಖೆಗೆ ಪ್ರಸ್ತಾವವನ್ನೇ ಸಲ್ಲಿಸಿಲ್ಲ’ ಎಂದು ಮೂಲಗಳು ಹೇಳಿವೆ.</p>.<p><strong>ಹೆಚ್ಚುತ್ತಿರುವ ವೆಚ್ಚವೂ ಕಾರಣ</strong></p>.<p>2016–17ರಲ್ಲಿ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲಾಗಿತ್ತು. ಆಗ ಅದರ ಬೆಲೆ ₹ 14,500 ಇತ್ತು. ಇಂದು ಅದರ ಬೆಲೆ ₹ 28 ಸಾವಿರಕ್ಕೆ ಹೆಚ್ಚಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮಾತ್ರ ಲ್ಯಾಪ್ಟಾಪ್ ನೀಡುವ ಯೋಜನೆ ಭಾರಿ ವಿವಾದ ಎಬ್ಬಿಸಿದ್ದರಿಂದ ಅದನ್ನು ಇತರರಿಗೂ ವಿತರಿಸಲು ನಿರ್ಧರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸರ್ಕಾರಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡುವ ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಮುಂದಿನ ವರ್ಷದಿಂದ ಶಾಶ್ವತವಾಗಿ ರದ್ದಾಗುವ ಸಾಧ್ಯತೆ ಇದೆ.</p>.<p>‘ರಾಜ್ಯ ಸರ್ಕಾರ ತೀವ್ರ ಆರ್ಥಿಕ ಸಂಕಷ್ಟದಲ್ಲಿದೆ. ಉಚಿತ ಲ್ಯಾಪ್ಟಾಪ್ಗೆ ಸುಮಾರು ₹ 280 ಕೋಟಿಯನ್ನು ಪ್ರತ್ಯೇಕವಾಗಿ ತೆಗೆದಿರಿಸಬೇಕಾಗುತ್ತದೆ. ಇದಕ್ಕೆ ಹಣಕಾಸು ಇಲಾಖೆಯ ತೀವ್ರ ಆಕ್ಷೇಪ ಇದೆ. ಹೀಗಾಗಿ ಮುಂದಿನ ವರ್ಷದಿಂದ ಯೋಜನೆ ಕೈಬಿಡುವ ಸ್ಥಿತಿ ಬರಬಹುದು’ ಎಂದು ಕಾಲೇಜು ಶಿಕ್ಷಣ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.</p>.<p>‘ಕಳೆದ ವರ್ಷವೇ ತೀವ್ರ ಆಕ್ಷೇಪ ಇತ್ತು. ಆದರೂ ಎರಡು ವರ್ಷದಿಂದ ಸ್ಥಗಿತವಾಗಿದ್ದ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗಿದೆ. 1.09 ಲಕ್ಷ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ನೀಡಲಾಗುತ್ತಿದೆ. ಈ ಬಾರಿ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿರುವುದರಿಂದ 2020–21ನೇ ಸಾಲಿಗೆ ಹಣಕಾಸು ಇಲಾಖೆಗೆ ಪ್ರಸ್ತಾವವನ್ನೇ ಸಲ್ಲಿಸಿಲ್ಲ’ ಎಂದು ಮೂಲಗಳು ಹೇಳಿವೆ.</p>.<p><strong>ಹೆಚ್ಚುತ್ತಿರುವ ವೆಚ್ಚವೂ ಕಾರಣ</strong></p>.<p>2016–17ರಲ್ಲಿ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲಾಗಿತ್ತು. ಆಗ ಅದರ ಬೆಲೆ ₹ 14,500 ಇತ್ತು. ಇಂದು ಅದರ ಬೆಲೆ ₹ 28 ಸಾವಿರಕ್ಕೆ ಹೆಚ್ಚಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮಾತ್ರ ಲ್ಯಾಪ್ಟಾಪ್ ನೀಡುವ ಯೋಜನೆ ಭಾರಿ ವಿವಾದ ಎಬ್ಬಿಸಿದ್ದರಿಂದ ಅದನ್ನು ಇತರರಿಗೂ ವಿತರಿಸಲು ನಿರ್ಧರಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>