ಇಲ್ಲಿನ ಚಂದಾಪುರದ ತಮ್ಮನಿವಾಸದಲ್ಲಿ ಭಾನುವಾರ ಸಮ್ಮೇಳನದ ಭಿತ್ತಿಪತ್ರ ಬಿಡುಗಡೆ ಮಾಡಿದ ಬಳಿಕ ‘ಪ್ರಜಾವಾಣಿ’ ಜೊತೆ ಮಾತನಾಡಿದ ಅವರು, ‘ಸಮ್ಮೇಳನದ ಸಿದ್ಧತೆ ಸಂದರ್ಭದಲ್ಲಿ ನಾನು ಜಿಲ್ಲಾಧಿಕಾರಿ ಅವರನ್ನು ಹಲವು ಬಾರಿ ಭೇಟಿಯಾಗಿದ್ದೇನೆ. ಆದರೆ, ಅವರು ಸಮ್ಮೇಳನದ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ ಮತ್ತು ಸಭೆಗಳಿಗೆ ಮೌಖಿಕವಾಗಿ ಆಹ್ವಾನಿಸಿಲ್ಲ. ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿನಿಧಿಗಳು ಮತ್ತು ಸಾಹಿತಿಗಳೂ ನನ್ನನ್ನು ಸಂಪರ್ಕಿಸಿಲ್ಲ’ ಎಂದರು.