ರಾಷ್ಟ್ರ ಧ್ವಜಾರೋಹಣಕ್ಕಷ್ಟೇ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲಾ ಉಸ್ತವಾರಿ ಸಚಿವ ಜಗದೀಶ ಶೆಟ್ಟರ್ ಧ್ವಜಾರೋಹಣ ನೆರವೇರಿಸಿದರು. ಪಥಸಂಚಲನದ ನಂತರ, ವಿದ್ಯಾರ್ಥಿಗಳಿಂದ ಕನ್ನಡ ಗೀತೆಗಳಿಗೆ ನೃತ್ಯ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ, ಅದನ್ನು ಸಚಿವರಾದಿಯಾಗಿ ಯಾರೊಬ್ಬ ಜನಪ್ರತಿನಿಧಿಯಾಗಲೀ, ಅಧಿಕಾರಿಗಳಾಗಲೀ ವೀಕ್ಷಿಸಲಿಲ್ಲ. ಹೀಗಾಗಿ, ತರಾತುರಿಯಲ್ಲಿ ಕಾರ್ಯಕ್ರಮ ಮುಗಿಸಲಾಯಿತು.