<p><strong>ಬೆಂಗಳೂರು:</strong> ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪುತ್ರ ಬಿ.ವೈ. ವಿಜಯೇಂದ್ರ ಅವರ ಆಪ್ತರು ಎಂದು ಹೇಳಿಕೊಂಡು ಉಮೇಶ್ ಹಾಗೂ ಬಿನ್ನಿ ಎಂಬುವರು ಗುತ್ತಿಗೆದಾರರ ಸಭೆ ನಡೆಸಿರುವುದು ಅಧಿಕಾರಿಗಳ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಇಬ್ಬರ ನಡೆಗೆ ಕೆಲವು ಅಧಿಕಾರಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.</p>.<p>‘ಕರ್ನಾಟಕ ನೀರಾವರಿ ನಿಗಮದ ಕಚೇರಿಯಲ್ಲೇ ಮೂರು ದಿನಗಳ ಹಿಂದೆ ಈ ಇಬ್ಬರು ಸಭೆ ನಡೆಸಿದ್ದಾರೆ. ಸಭೆಗೆ ಹಾಜರಾಗುವಂತೆ ಮೆಘಾ ಕನ್ಸ್ಟ್ರಕ್ಷನ್, ರಾಮಲಿಂಗಂ ಕನ್ಸ್ಟ್ರಕ್ಷನ್ ಸೇರಿದಂತೆ ₹100 ಕೋಟಿಗಿಂತ ಹೆಚ್ಚಿನ ಕಾಮಗಾರಿ ನಡೆಸುವ ಗುತ್ತಿಗೆದಾರರಿಗೆ ಕರೆ ಮಾಡಿದ್ದರು. ಈ ಪೈಕಿ, ಕೆಲವು ಗುತ್ತಿಗೆದಾರರಷ್ಟೇ ಸಭೆಯಲ್ಲಿ ಭಾಗವಹಿಸಿದ್ದರು. ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಅನುಷ್ಠಾನಗೊಂಡ ನೀರಾವರಿ ಯೋಜನೆಗಳ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಿದರು.</p>.<p>‘ಜುಲೈ ತಿಂಗಳಲ್ಲಿ ಅನುಮೋದನೆ ನೀಡಿರುವ ಯೋಜನೆಗಳಿಗೆ ತಡೆ ನೀಡಲಾಗಿದ್ದು, ಆ ಯೋಜನೆಗಳ ಗುತ್ತಿಗೆದಾರರನ್ನು ಬದಲಿಸುತ್ತೇವೆ. ನಮ್ಮ ಮಾತು ಹೇಳಿದರೆ ನಿಮಗೆ ಈ ಗುತ್ತಿಗೆಗಳನ್ನು ಕೊಡಿಸುತ್ತೇವೆ’ ಎಂದು ಗುತ್ತಿಗೆದಾರರ ಓಲೈಸುವ ಪ್ರಯತ್ನ ಮಾಡಿದರು’ ಎಂದು ಹೆಸರು ಬಹಿರಂಗಗೊಳಿಸಲು ಇಚ್ಛಿಸದ ಗುತ್ತಿಗೆದಾರರೊಬ್ಬರು ತಿಳಿಸಿದರು.</p>.<p><strong>ಅಧಿಕಾರಿಗಳಿಗೆ ಕರೆ– ಆರೋಪ:</strong> ‘ನಮ್ಮದೇ ಸರ್ಕಾರ ಬಂದಿದ್ದು, ನಿಮಗೆ ಬೇಕಾದ ಜಾಗಕ್ಕೆ ವರ್ಗ ಮಾಡಿಸುತ್ತೇವೆ ಎಂದು ಉಮೇಶ್ ಹಾಗೂ ಬಿನ್ನಿ ಎನ್ನುವವರು ಕರೆ ಮಾಡಿದ್ದಾರೆ’ ಎಂದು ಹೆಸರು ಹೇಳಲು ಇಚ್ಛಿಸದ ಹಲವು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಈ ಇಬ್ಬರು ಜಲಸಂಪನ್ಮೂಲ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್, ಅಬಕಾರಿ, ಪೊಲೀಸ್ ಅಧಿಕಾರಿಗಳು ಹಾಗೂ ಕೆಲವು ತಹಶೀಲ್ದಾರ್ಗಳಿಗೆ ಕರೆ ಮಾಡಿ ವರ್ಗ ಮಾಡಿಸುವುದಾಗಿ ಆಮಿಷ ಒಡ್ಡಿದ್ದಾರೆ ಎಂದು ಅಧಿಕಾರಿಗಳು ದೂರಿದ್ದಾರೆ.</p>.<p>‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಸರ್ಕಾರ ಉರುಳಿಸಲು ನೆರವಾದವರಿಗೆ ಕಮಿಟ್ಮೆಂಟ್ ತೀರಿಸಬೇಕಾಗಿದೆ. ಹೀಗಾಗಿ, ನೀವು ನೆರವಾಗಲೇಬೇಕು ಎಂದು ಸೂಚನೆ ನೀಡುತ್ತಿದ್ದಾರೆ. ಏನು ಮಾಡುವುದೆಂದು ನಮಗೂ ಗೊತ್ತಾಗುತ್ತಿಲ್ಲ’ ಎಂದು ಐಎಎಸ್, ಐಪಿಎಸ್ಗೆ ಹುದ್ದೆ ಬಡ್ತಿ ಪಡೆದಿರುವ ಇಬ್ಬರು ಅಧಿಕಾರಿಗಳು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಪ್ರತಿಕ್ರಿಯೆಗಾಗಿ ಬಿ.ವೈ.ವಿಜಯೇಂದ್ರ ಅವರು ಮೊಬೈಲ್ಗೆ ಕರೆ ಮಾಡಿದರೂ ಅವರು ಸ್ವೀಕರಿಸಲಿಲ್ಲ.</p>.<p><strong>ಗುತ್ತಿಗೆದಾರರ ಮೇಲೆ ಒತ್ತಡ; ಕುಮಾರಸ್ವಾಮಿ ಆರೋಪ</strong></p>.<p>‘ನಗರದ ಶಾಂಗ್ರಿಲಾ ಹೋಟೆಲ್ನಲ್ಲಿ ಬಿ.ವೈ. ವಿಜಯೇಂದ್ರ ಅವರು ನಗರದ ಬಿಲ್ಡರ್ಗಳ ಸಭೆ ನಡೆಸಿ ₹100 ಕೋಟಿ ಬೇಡಿಕೆ ಇಟ್ಟಿದ್ದಾರೆ. ಬಿಲ್ಡರ್ಗಳು ಎದುರಿಸುತ್ತಿರುವ ಸಮಸ್ಯೆ ಇದ್ದರೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳೇ ಸಭೆ ನಡೆಸಬೇಕಿತ್ತು. ಅದು ಬಿಟ್ಟು ಹೋಟೆಲ್ನಲ್ಲಿ ಸಭೆ ನಡೆಸಿದ್ದು ಏಕೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.</p>.<p>‘ಕೆಲವು ಇಲಾಖೆಗಳಲ್ಲಿ ಗುತ್ತಿಗೆದಾರರಿಂದ ಶೇ 6ರಿಂದ 10 ರಷ್ಟು ಕಮಿಷನ್ ಪಡೆಯುವ ಪದ್ಧತಿ ಹಿಂದೆಲ್ಲ ಇತ್ತು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಗುತ್ತಿಗೆದಾರರು ಪಡೆಯುವ ಲಾಭಾಂಶದಲ್ಲಿ ಶೇ 50 ಕೇಳುವ (₹30 ಕೋಟಿ ಲಾಭ ಗಳಿಸಿದ್ದರೆ ₹15 ಕೋಟಿ) ಸಂಸ್ಕೃತಿ ಆರಂಭವಾಗಿದೆ. ಇದೊಂದು ಹೊಸ ಬೆಳವಣಿಗೆ’ ಎಂದು ಅವರು ಹೇಳಿದರು.</p>.<p>‘ಹೇಮಾವತಿ ನಾಲೆ ಆಧುನೀಕರಣ ಕಾಮಗಾರಿ ಹೆಸರಿನಲ್ಲಿ ಎಚ್.ಡಿ.ರೇವಣ್ಣ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ತನಿಖೆ ನಡೆಸಲು ಹಿರಿಯ ಐಎಎಸ್ ಅಧಿಕಾರಿ ಅಜಯ್ ಸೇಠ್ ನೇತೃತ್ವದಲ್ಲಿ ಸಮಿತಿ ರಚಿಸಿದ್ದೆ. ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರಿಗೆ ಇತ್ತೀಚೆಗೆ ಕರೆ ಮಾಡಿ ₹100 ಕೋಟಿ ಕೊಡುವಂತೆ ಕೇಳಿದ್ದಾರೆ. ಶಾಸಕರ ಖರೀದಿಗಾಗಿ ಖರ್ಚು ಮಾಡಿದ್ದರು. ಅದಕ್ಕೆ ಈಗ ವಸೂಲಿ ಶುರುವಾಗಿದೆ’ ಎಂದು ಆರೋಪಿಸಿದರು.</p>.<p>‘ಬೆಂಗಳೂರಿನ ಆಯಕಟ್ಟಿನ ಹುದ್ದೆಗೆ ₹15 ಕೋಟಿ ಕೊಟ್ಟು ಒಬ್ಬರು ಬಂದಿದ್ದಾರೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾಧಿಕಾರಿಗಳ ಬದಲಾವಣೆಗೂ ಯತ್ನ ನಡೆದಿದ್ದು, ಆ ಹುದ್ದೆಗಳಿಗೆ ತಲಾ ₹7.5 ಕೋಟಿ ಬೇಡಿಕೆ ಇಟ್ಟಿದ್ದಾರೆ’ ಎಂದು ಆರೋಪಿಸಿದರು.</p>.<p>**</p>.<p>ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಆಗಿರುವ ಬೆಳವಣಿಗೆಗಳ ಬಗ್ಗೆ ಸಾಕಷ್ಟು ಮಾತನಾಡುವುದು ಇದೆ. ಈ ಬಗ್ಗೆ ಒಂದೆರಡು ದಿನಗಳಲ್ಲಿ ಪತ್ರಿಕಾಗೋಷ್ಠಿ ನಡೆಸುತ್ತೇನೆ<br /><em><strong>- ಡಿ.ಕೆ.ಶಿವಕುಮಾರ್, ಕಾಂಗ್ರೆಸ್ನ ಹಿರಿಯ ಶಾಸಕ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪುತ್ರ ಬಿ.ವೈ. ವಿಜಯೇಂದ್ರ ಅವರ ಆಪ್ತರು ಎಂದು ಹೇಳಿಕೊಂಡು ಉಮೇಶ್ ಹಾಗೂ ಬಿನ್ನಿ ಎಂಬುವರು ಗುತ್ತಿಗೆದಾರರ ಸಭೆ ನಡೆಸಿರುವುದು ಅಧಿಕಾರಿಗಳ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಇಬ್ಬರ ನಡೆಗೆ ಕೆಲವು ಅಧಿಕಾರಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.</p>.<p>‘ಕರ್ನಾಟಕ ನೀರಾವರಿ ನಿಗಮದ ಕಚೇರಿಯಲ್ಲೇ ಮೂರು ದಿನಗಳ ಹಿಂದೆ ಈ ಇಬ್ಬರು ಸಭೆ ನಡೆಸಿದ್ದಾರೆ. ಸಭೆಗೆ ಹಾಜರಾಗುವಂತೆ ಮೆಘಾ ಕನ್ಸ್ಟ್ರಕ್ಷನ್, ರಾಮಲಿಂಗಂ ಕನ್ಸ್ಟ್ರಕ್ಷನ್ ಸೇರಿದಂತೆ ₹100 ಕೋಟಿಗಿಂತ ಹೆಚ್ಚಿನ ಕಾಮಗಾರಿ ನಡೆಸುವ ಗುತ್ತಿಗೆದಾರರಿಗೆ ಕರೆ ಮಾಡಿದ್ದರು. ಈ ಪೈಕಿ, ಕೆಲವು ಗುತ್ತಿಗೆದಾರರಷ್ಟೇ ಸಭೆಯಲ್ಲಿ ಭಾಗವಹಿಸಿದ್ದರು. ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಅನುಷ್ಠಾನಗೊಂಡ ನೀರಾವರಿ ಯೋಜನೆಗಳ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಿದರು.</p>.<p>‘ಜುಲೈ ತಿಂಗಳಲ್ಲಿ ಅನುಮೋದನೆ ನೀಡಿರುವ ಯೋಜನೆಗಳಿಗೆ ತಡೆ ನೀಡಲಾಗಿದ್ದು, ಆ ಯೋಜನೆಗಳ ಗುತ್ತಿಗೆದಾರರನ್ನು ಬದಲಿಸುತ್ತೇವೆ. ನಮ್ಮ ಮಾತು ಹೇಳಿದರೆ ನಿಮಗೆ ಈ ಗುತ್ತಿಗೆಗಳನ್ನು ಕೊಡಿಸುತ್ತೇವೆ’ ಎಂದು ಗುತ್ತಿಗೆದಾರರ ಓಲೈಸುವ ಪ್ರಯತ್ನ ಮಾಡಿದರು’ ಎಂದು ಹೆಸರು ಬಹಿರಂಗಗೊಳಿಸಲು ಇಚ್ಛಿಸದ ಗುತ್ತಿಗೆದಾರರೊಬ್ಬರು ತಿಳಿಸಿದರು.</p>.<p><strong>ಅಧಿಕಾರಿಗಳಿಗೆ ಕರೆ– ಆರೋಪ:</strong> ‘ನಮ್ಮದೇ ಸರ್ಕಾರ ಬಂದಿದ್ದು, ನಿಮಗೆ ಬೇಕಾದ ಜಾಗಕ್ಕೆ ವರ್ಗ ಮಾಡಿಸುತ್ತೇವೆ ಎಂದು ಉಮೇಶ್ ಹಾಗೂ ಬಿನ್ನಿ ಎನ್ನುವವರು ಕರೆ ಮಾಡಿದ್ದಾರೆ’ ಎಂದು ಹೆಸರು ಹೇಳಲು ಇಚ್ಛಿಸದ ಹಲವು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಈ ಇಬ್ಬರು ಜಲಸಂಪನ್ಮೂಲ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್, ಅಬಕಾರಿ, ಪೊಲೀಸ್ ಅಧಿಕಾರಿಗಳು ಹಾಗೂ ಕೆಲವು ತಹಶೀಲ್ದಾರ್ಗಳಿಗೆ ಕರೆ ಮಾಡಿ ವರ್ಗ ಮಾಡಿಸುವುದಾಗಿ ಆಮಿಷ ಒಡ್ಡಿದ್ದಾರೆ ಎಂದು ಅಧಿಕಾರಿಗಳು ದೂರಿದ್ದಾರೆ.</p>.<p>‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಸರ್ಕಾರ ಉರುಳಿಸಲು ನೆರವಾದವರಿಗೆ ಕಮಿಟ್ಮೆಂಟ್ ತೀರಿಸಬೇಕಾಗಿದೆ. ಹೀಗಾಗಿ, ನೀವು ನೆರವಾಗಲೇಬೇಕು ಎಂದು ಸೂಚನೆ ನೀಡುತ್ತಿದ್ದಾರೆ. ಏನು ಮಾಡುವುದೆಂದು ನಮಗೂ ಗೊತ್ತಾಗುತ್ತಿಲ್ಲ’ ಎಂದು ಐಎಎಸ್, ಐಪಿಎಸ್ಗೆ ಹುದ್ದೆ ಬಡ್ತಿ ಪಡೆದಿರುವ ಇಬ್ಬರು ಅಧಿಕಾರಿಗಳು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಪ್ರತಿಕ್ರಿಯೆಗಾಗಿ ಬಿ.ವೈ.ವಿಜಯೇಂದ್ರ ಅವರು ಮೊಬೈಲ್ಗೆ ಕರೆ ಮಾಡಿದರೂ ಅವರು ಸ್ವೀಕರಿಸಲಿಲ್ಲ.</p>.<p><strong>ಗುತ್ತಿಗೆದಾರರ ಮೇಲೆ ಒತ್ತಡ; ಕುಮಾರಸ್ವಾಮಿ ಆರೋಪ</strong></p>.<p>‘ನಗರದ ಶಾಂಗ್ರಿಲಾ ಹೋಟೆಲ್ನಲ್ಲಿ ಬಿ.ವೈ. ವಿಜಯೇಂದ್ರ ಅವರು ನಗರದ ಬಿಲ್ಡರ್ಗಳ ಸಭೆ ನಡೆಸಿ ₹100 ಕೋಟಿ ಬೇಡಿಕೆ ಇಟ್ಟಿದ್ದಾರೆ. ಬಿಲ್ಡರ್ಗಳು ಎದುರಿಸುತ್ತಿರುವ ಸಮಸ್ಯೆ ಇದ್ದರೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳೇ ಸಭೆ ನಡೆಸಬೇಕಿತ್ತು. ಅದು ಬಿಟ್ಟು ಹೋಟೆಲ್ನಲ್ಲಿ ಸಭೆ ನಡೆಸಿದ್ದು ಏಕೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.</p>.<p>‘ಕೆಲವು ಇಲಾಖೆಗಳಲ್ಲಿ ಗುತ್ತಿಗೆದಾರರಿಂದ ಶೇ 6ರಿಂದ 10 ರಷ್ಟು ಕಮಿಷನ್ ಪಡೆಯುವ ಪದ್ಧತಿ ಹಿಂದೆಲ್ಲ ಇತ್ತು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಗುತ್ತಿಗೆದಾರರು ಪಡೆಯುವ ಲಾಭಾಂಶದಲ್ಲಿ ಶೇ 50 ಕೇಳುವ (₹30 ಕೋಟಿ ಲಾಭ ಗಳಿಸಿದ್ದರೆ ₹15 ಕೋಟಿ) ಸಂಸ್ಕೃತಿ ಆರಂಭವಾಗಿದೆ. ಇದೊಂದು ಹೊಸ ಬೆಳವಣಿಗೆ’ ಎಂದು ಅವರು ಹೇಳಿದರು.</p>.<p>‘ಹೇಮಾವತಿ ನಾಲೆ ಆಧುನೀಕರಣ ಕಾಮಗಾರಿ ಹೆಸರಿನಲ್ಲಿ ಎಚ್.ಡಿ.ರೇವಣ್ಣ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ತನಿಖೆ ನಡೆಸಲು ಹಿರಿಯ ಐಎಎಸ್ ಅಧಿಕಾರಿ ಅಜಯ್ ಸೇಠ್ ನೇತೃತ್ವದಲ್ಲಿ ಸಮಿತಿ ರಚಿಸಿದ್ದೆ. ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರಿಗೆ ಇತ್ತೀಚೆಗೆ ಕರೆ ಮಾಡಿ ₹100 ಕೋಟಿ ಕೊಡುವಂತೆ ಕೇಳಿದ್ದಾರೆ. ಶಾಸಕರ ಖರೀದಿಗಾಗಿ ಖರ್ಚು ಮಾಡಿದ್ದರು. ಅದಕ್ಕೆ ಈಗ ವಸೂಲಿ ಶುರುವಾಗಿದೆ’ ಎಂದು ಆರೋಪಿಸಿದರು.</p>.<p>‘ಬೆಂಗಳೂರಿನ ಆಯಕಟ್ಟಿನ ಹುದ್ದೆಗೆ ₹15 ಕೋಟಿ ಕೊಟ್ಟು ಒಬ್ಬರು ಬಂದಿದ್ದಾರೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲಾಧಿಕಾರಿಗಳ ಬದಲಾವಣೆಗೂ ಯತ್ನ ನಡೆದಿದ್ದು, ಆ ಹುದ್ದೆಗಳಿಗೆ ತಲಾ ₹7.5 ಕೋಟಿ ಬೇಡಿಕೆ ಇಟ್ಟಿದ್ದಾರೆ’ ಎಂದು ಆರೋಪಿಸಿದರು.</p>.<p>**</p>.<p>ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಆಗಿರುವ ಬೆಳವಣಿಗೆಗಳ ಬಗ್ಗೆ ಸಾಕಷ್ಟು ಮಾತನಾಡುವುದು ಇದೆ. ಈ ಬಗ್ಗೆ ಒಂದೆರಡು ದಿನಗಳಲ್ಲಿ ಪತ್ರಿಕಾಗೋಷ್ಠಿ ನಡೆಸುತ್ತೇನೆ<br /><em><strong>- ಡಿ.ಕೆ.ಶಿವಕುಮಾರ್, ಕಾಂಗ್ರೆಸ್ನ ಹಿರಿಯ ಶಾಸಕ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>