ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಲಾಕ್‌ಡೌನ್‌ ಮುಂದುವರಿಕೆ ಅಗತ್ಯವಿಲ್ಲ: ಸಚಿವ ಸುರೇಶ ಅಂಗಡಿ

Last Updated 24 ಜೂನ್ 2020, 13:07 IST
ಅಕ್ಷರ ಗಾತ್ರ

ಬೆಳಗಾವಿ: ‘ಕೊರೊನಾ ವೈರಾಣು ಜೊತೆ ನಾವು ಬದುಕಬೇಕಿದೆ. ಹೀಗಾಗಿ, ರಾಜ್ಯದಲ್ಲಿ ಲಾಕ್‍ಡೌನ್ ಮುಂದುವರಿಸಬೇಕಾದ ಅಗತ್ಯವಿಲ್ಲ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.

ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಜನರನ್ನು ಹೆದರಿಸುವುದಕ್ಕಾಗಿಯೇ ಕೊರೊನಾ ವೈರಸ್ ಸೃಷ್ಟಿಸಿದ್ದಾರೆ. ದೇಶದಲ್ಲಿ ಆತಂಕ ಹುಟ್ಟಿಸಿದ್ದಾರೆ’ ಎಂದು ಪರೋಕ್ಷವಾಗಿ ಚೀನಾ ವಿರುದ್ಧ ವಾಗ್ದಾಳಿ ನಡೆಸಿದರು.

‘ಹಲವು ಸಾಂಕ್ರಾಮಿಕ ರೋಗಗಳು ದೇಶದಲ್ಲಿ ಬಂದಿವೆ, ಹೋಗಿವೆ. ಕೆಲವು ಕಾಯಿಲೆಗಳೊಂದಿಗೆ ನಾವು ಬದುಕುತ್ತಿದ್ದೇವೆ. ಕೋವಿಡ್–19 ಗುಣಮುಖವಾಗದಂಥ ರೋಗವೇನೂ ಅಲ್ಲ. ಆದರೆ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಅಂತರ ಕಾಯ್ದುಕೊಳ್ಳಬೇಕು. ಮಾಸ್ಕ್‌ ಧರಿಸಬೇಕು ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಮುನ್ನೆಚ್ಚರಿಕೆ ವಹಿಸಿದರೆ ಕೊರೊನಾ ಸೋಂಕಿತರು ಗುಣಮುಖವಾಗುತ್ತಾರೆ. ಹೀಗಾಗಿ, ಯಾರೂ ಆತಂಕ ಪಡಬೇಕಾಗಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT