<p><strong>ಮಂಗಳೂರು:</strong> ‘ಶತಮಾನಗಳಿಂದ ತುಳಿತಕ್ಕೆ ಒಳಗಾದವರಿಗೆ ಶಿಕ್ಷಣ ಹಾಗೂ ಸೌಲಭ್ಯಗಳಲ್ಲಿ ಮೀಸಲಾತಿ ನೀಡಬೇಕು. ಆದರೆ, ಮೀಸಲಾತಿ ಪಡೆದು ಅಭಿವೃದ್ಧಿ ಹೊಂದಿದವರ ಮಕ್ಕಳಿಗೂ ಮತ್ತೆ ಮೀಸಲಾತಿ ಬೇಡ. ಅಂತೆಯೇ ಬಡ್ತಿಯಲ್ಲೂ ಮೀಸಲಾತಿ ನೀಡುವ ಅಗತ್ಯವಿಲ್ಲ’ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.</p>.<p>ನಗರದಲ್ಲಿ ಶನಿವಾರ ‘ಮತ್ತೆ ಕಲ್ಯಾಣ’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆಗಿನ ಸಂವಾದದಲ್ಲಿ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಜಾತಿ–ಧರ್ಮದ ವ್ಯವಸ್ಥೆಯನ್ನು ಅಳಿಸಲು ಸಾಧ್ಯವಿಲ್ಲ. ಆದರೆ, ಪರಸ್ಪರ ಪ್ರೀತಿ–ಸೌಹಾರ್ದತೆಯಿಂದ ಅರಿತು–ಬೆರೆತು ಸಮಾಜದಲ್ಲಿ ಸಾಮರಸ್ಯ ಮತ್ತು ಅಭಿವೃದ್ಧಿ ಸಾಧಿಸಲು ಸಾಧ್ಯ’ ಎಂದು ಪ್ರತಿಪಾದಿಸಿದರು.</p>.<p>ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಸವ ಸಿದ್ಧಾಂತ ಅನುಸರಿಸುವವರೆಲ್ಲಾ ಲಿಂಗಾಯತರೇ. ಲಿಂಗಾಯತ ಎನ್ನುವುದು ಜಾತಿ ಅಲ್ಲ. ಅದು ತತ್ವ, ಒಂದು ಸಿದ್ಧಾಂತ. ಕೇವಲ ಯಡಿಯೂರಪ್ಪ ಅವರೊಬ್ಬರನ್ನು ಮಾತ್ರ ಲಿಂಗಾಯತರೆಂದು ಕರೆದರೆ ಹೇಗೆ?’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>‘ಮತ್ತೆ ಕಲ್ಯಾಣ’ ವಿವಿಧ ಜಿಲ್ಲೆಗಳಲ್ಲಿ ವಿವಿಧ ಸ್ವರೂಪಗಳಲ್ಲಿ ನಡೆಯಲಿದೆ. ಆ ಬಳಿಕ ಸಾಣೇಹಳ್ಳಿಯಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನದ ರಾಜ್ಯ ಮಟ್ಟದ 20 ದಿನಗಳ ಕಾರ್ಯಾಗಾರ ನಡೆಸಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ‘ಶತಮಾನಗಳಿಂದ ತುಳಿತಕ್ಕೆ ಒಳಗಾದವರಿಗೆ ಶಿಕ್ಷಣ ಹಾಗೂ ಸೌಲಭ್ಯಗಳಲ್ಲಿ ಮೀಸಲಾತಿ ನೀಡಬೇಕು. ಆದರೆ, ಮೀಸಲಾತಿ ಪಡೆದು ಅಭಿವೃದ್ಧಿ ಹೊಂದಿದವರ ಮಕ್ಕಳಿಗೂ ಮತ್ತೆ ಮೀಸಲಾತಿ ಬೇಡ. ಅಂತೆಯೇ ಬಡ್ತಿಯಲ್ಲೂ ಮೀಸಲಾತಿ ನೀಡುವ ಅಗತ್ಯವಿಲ್ಲ’ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.</p>.<p>ನಗರದಲ್ಲಿ ಶನಿವಾರ ‘ಮತ್ತೆ ಕಲ್ಯಾಣ’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಜೊತೆಗಿನ ಸಂವಾದದಲ್ಲಿ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಜಾತಿ–ಧರ್ಮದ ವ್ಯವಸ್ಥೆಯನ್ನು ಅಳಿಸಲು ಸಾಧ್ಯವಿಲ್ಲ. ಆದರೆ, ಪರಸ್ಪರ ಪ್ರೀತಿ–ಸೌಹಾರ್ದತೆಯಿಂದ ಅರಿತು–ಬೆರೆತು ಸಮಾಜದಲ್ಲಿ ಸಾಮರಸ್ಯ ಮತ್ತು ಅಭಿವೃದ್ಧಿ ಸಾಧಿಸಲು ಸಾಧ್ಯ’ ಎಂದು ಪ್ರತಿಪಾದಿಸಿದರು.</p>.<p>ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಸವ ಸಿದ್ಧಾಂತ ಅನುಸರಿಸುವವರೆಲ್ಲಾ ಲಿಂಗಾಯತರೇ. ಲಿಂಗಾಯತ ಎನ್ನುವುದು ಜಾತಿ ಅಲ್ಲ. ಅದು ತತ್ವ, ಒಂದು ಸಿದ್ಧಾಂತ. ಕೇವಲ ಯಡಿಯೂರಪ್ಪ ಅವರೊಬ್ಬರನ್ನು ಮಾತ್ರ ಲಿಂಗಾಯತರೆಂದು ಕರೆದರೆ ಹೇಗೆ?’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p>‘ಮತ್ತೆ ಕಲ್ಯಾಣ’ ವಿವಿಧ ಜಿಲ್ಲೆಗಳಲ್ಲಿ ವಿವಿಧ ಸ್ವರೂಪಗಳಲ್ಲಿ ನಡೆಯಲಿದೆ. ಆ ಬಳಿಕ ಸಾಣೇಹಳ್ಳಿಯಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನದ ರಾಜ್ಯ ಮಟ್ಟದ 20 ದಿನಗಳ ಕಾರ್ಯಾಗಾರ ನಡೆಸಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>