ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನನ್ನನ್ನು ಯಾರೂ ಪ್ರಶ್ನಿಸುವಂತಿಲ್ಲ: ರೇಣುಕಾಚಾರ್ಯ

Last Updated 29 ಮಾರ್ಚ್ 2020, 7:10 IST
ಅಕ್ಷರ ಗಾತ್ರ

ದಾವಣಗೆರೆ: ನಾನು ಜನಪ್ರತಿನಿಧಿ. ಅಲ್ಲಿ ಹೋಗಬೇಡ, ಇಲ್ಲಿ ಹೋಗಬೇಡ ಎಂದು ಯಾರೂ ಹೇಳುವಂತಿಲ್ಲ. ನನ್ನನ್ನು ಪ್ರಶ್ನಿಸುವ ಅಧಿಕಾರ ಯಾರಿಗೂ ಇಲ್ಲ ಎಂದು ರೇಣುಕಾಚಾರ್ಯ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ಕೊರೊನಾ ವೈರಸ್‌ ವಿರುದ್ಧ ಜಾಗೃತಿ ಮೂಡಿಸುವುದಾಗಿ ದಾವಣಗೆರೆಯಲ್ಲಿ ಓಡಾಡುತ್ತಿದ್ದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಅವರನ್ನು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ ಪ್ರಶ್ನೆ ಮಾಡಿ, ತರಾಟೆಗೆ ತೆಗೆದುಕೊಂಡಿದ್ದು. ಈ ಕುರಿತು ಮಾತನಾಡಿರುವ ರೇಣುಕಾಚಾರ್ಯ .ಸಂಸದರ ಮನೆಗೆ ನಾನು, ಮೇಯರ್ ಹೋಗಿದ್ದೇವೆ. 10 ಅಡಿ ದೂರ ನಿಂತು ಆರೋಗ್ಯ ವಿಚಾರಿಸಿದೆ. ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

ರೇಣುಕಾಚಾರ್ಯ ಅವರು ಮುಖ್ಯಮಂತ್ರಿಗಳ ಕಾರ್ಯದರ್ಶಿ. ಅವರು ರಾಜ್ಯದ ಎಲ್ಲಕಡೆ ಹೋಗಬಹುದು ಎಂದು ಮೇಯರ್ ಬಿ.ಜಿ. ಅಜಯ ಕುಮಾರ್ ಸಮರ್ಥಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT