‘ವಿರೋಧಪಕ್ಷದಲ್ಲಿರುವ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರು, ರಾಜ್ಯಸಭಾ ಸದಸ್ಯರ ನಿಧಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುತ್ತೇವೆ. ಈ ಬಗ್ಗೆ ನಾಯಕರಾದ ಸಿದ್ದರಾಮಯ್ಯ, ಎಚ್.ಡಿ. ಕುಮಾರಸ್ವಾಮಿ ಜೊತೆಯೂ ಚರ್ಚಿಸುತ್ತೇನೆ. ನನ್ನ ನಿಧಿಯಿಂದ ₹ 50 ಲಕ್ಷ ತೆಗೆದುಕೊಳ್ಳುವಂತೆ ಪತ್ರ ಬರೆಯುತ್ತೇನೆ. ವೈಯಕ್ತಿಕವಾಗಿಯೂ ನೆರವಾಗುತ್ತೇನೆ’ ಎಂದರು.