‘ಪರೀಕ್ಷೆ ಬರೆದು ಸುಖವಾಗಿರಬೇಕು ಎಂಬುದು ವಿದ್ಯಾರ್ಥಿಗಳ ಆಸೆ. ಅವರ ಆರೋಗ್ಯವನ್ನು ಕಾಪಾಡಬೇಕೆಂಬ ಹಿತ ಸರ್ಕಾರದ್ದು. ಸುಖ, ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ಪರೀಕ್ಷೆಯನ್ನು ಬೇರೆ ದಿನಾಂಕದಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಹೊಸ ವೇಳಾಪಟ್ಟಿಯನ್ನು ಸದ್ಯದಲ್ಲೇ ಪ್ರಕಟಿಸುತ್ತೇವೆ. ವಿದ್ಯಾರ್ಥಿಗಳು ಮತ್ತಷ್ಟು ಅಧ್ಯಯನ ಮಾಡಬೇಕು. ಯಾರೂ ಹತಾಶರಾಗಬಾರದು. ಈ ವಿಶೇಷ ವಿಸ್ತರಿತ ರಜೆಯಲ್ಲಿ ವಿದ್ಯಾರ್ಥಿಗಳು ಅಧ್ಯಯನ ಕೈಗೊಳ್ಳಬೇಕು. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ನಾನು ಶುಭ ಕೋರುತ್ತೇನೆ,’ ಎಂದು ಸುರೇಶ್ ಕುಮಾರ್ ಆಶಿಸಿದ್ದಾರೆ.