ಮುಂಡಗೋಡ: ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗುಜರಾತ್, ಉತ್ತರಪ್ರದೇಶ, ಕಾಶ್ಮೀರ ಹಾಗೂ ಹರಿಯಾಣದಲ್ಲಿ ದಲಿತರು ಹಾಗೂ ಹೆಣ್ಣುಮಕ್ಕಳ ಮೇಲೆ ಹಲ್ಲೆ, ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿವೆ. ಘಟನೆ ಖಂಡಿಸಬೇಕಾದ ಪ್ರಧಾನಿ ಮೋದಿ ಮಾತ್ರ ಬಾಯಿಬಿಡುತ್ತಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ಆರೋಪಿಸಿದರು.