ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಶಾಸಕ ಪಕ್ಷದ ಸಭೆಗೆ ಹೋಗುವುದಿಲ್ಲ: ಆನಂದ್ ಸಿಂಗ್ 

Last Updated 8 ಜುಲೈ 2019, 6:51 IST
ಅಕ್ಷರ ಗಾತ್ರ

ಹೊಸಪೇಟೆ:‘ಜೆಡಿಎಸ್ ಮತ್ತು ಕಾಂಗ್ರೆಸ್ಶಾಸಕರು ರಾಜೀನಾಮೆ ಕೊಡುವ ವಿಚಾರ ಗೊತ್ತಿರಲಿಲ್ಲ’ ಎಂದು ಶಾಸಕ ಆನಂದ್‌ ಸಿಂಗ್ ಹೇಳಿದರು.‘ಜಿಂದಾಲ್‌ಗೆಜಮೀನು ಮಾರಾಟ ಮಾಡಬಾರದು. ವಿಜಯನಗರ ಜಿಲ್ಲೆ ಘೋಷಣೆ ಮಾಡಬೇಕು. ಈ ಎರಡೂ ಬೇಡಿಕೆಗಳು ಈಡೇರುವವರೆಗೆ ನಾನುರಾಜೀನಾಮೆ ಹಿಂಪಡೆಯುವುದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.

ನಗರದಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜೀನಾಮೆ ಕುರಿತು ಸ್ಪೀಕರ್ ನೋಟಿಸ್ ಕೊಟ್ಟಿದ್ದಾರೆ. ಅದಕ್ಕೆ‌ ಉತ್ತರ ಕೊಡುವೆ.ರಾಜೀನಾಮೆ ಕೊಟ್ಟು ಮುಂಬೈಗೆ ಹೋಗುತ್ತಿರುವ ಶಾಸಕರ ಬಗ್ಗೆ ಪ್ರತಿಕ್ರಿಯಿಸಲಾರೆ’ ಎಂದರು.

‘ನಾನು ಬಿಜೆಪಿ ಸೇರುವುದರ ಬಗ್ಗೆ ಪ್ರತಿಕ್ರಿಯಿಸಲಾರೆ. ಕಾಂಗ್ರೆಸ್ ಶಾಸಕಾಂಗ ಸಭೆಗೆ ಹಾಜರಾಗುವುದಿಲ್ಲ.ಸಿ.ಎಂ.ನನ್ನನ್ನು ಸಂಪರ್ಕಿಸಿರುವುದು ನಿಜ. ಅಮೆರಿಕದಿಂದಲೇ ಕರೆ ಮಾಡಿದ್ದರು. ನನ್ನ ಬೇಡಿಕೆ ಈಡೇರಿಸುವವರೆಗೆ ರಾಜೀನಾಮೆ ಹಿಂಪಡೆಯುವುದಿಲ್ಲ ಎಂದು ತಿಳಿಸಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT