‘ಕೃಷಿ ಉತ್ಪನ್ನಗಳ ಸಾಗಣೆಗೆ ಮುಕ್ತ ಅನುಮತಿ ನೀಡುವಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ. ಲಾಕ್ಡೌನ್ನಿಂದಾಗಿ ಕೃಷಿ ಉತ್ಪನ್ನಗಳು ಹಾಳಾಗದಂತೆ ನೋಡಿಕೊಳ್ಳುವುದು ನಮ್ಮ ಉದ್ದೇಶವಾಗಿದೆ. ಜಿಲ್ಲೆಯ ಕರಾವಳಿಯಲ್ಲಿ ಬೆಳೆಯುವ ಕಲ್ಲಂಗಡಿ, ಮಲೆನಾಡು ಭಾಗದ ಅನಾನಸ್, ಬಾಳೆಹಣ್ಣು, ಪಪ್ಪಾಯಿಯನ್ನು ಹೊರಭಾಗಕ್ಕೆ ಕಳುಹಿಸಲು ನಾವು ಸಿದ್ಧವಾಗಿದ್ದೇವೆ. ಆದರೆ, ಖರೀದಿಸಲು ಮಾರುಕಟ್ಟೆ ಸಿದ್ಧವಾಗಿಲ್ಲ.ಹಾಗಾಗಿ ಇದರಿಂದ ಸ್ವಲ್ಪ ಸಮಸ್ಯೆಯಾಗಿದ್ದು,ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಹೇಳಿದರು.