ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ‘ರಾಜ್ಯದ ಜನತೆ ಸರಳವಾಗಿ ತಮ್ಮ ಮನೆಯಲ್ಲೇ ಯುಗಾದಿ ಹಬ್ಬ ಆಚರಿಸಬೇಕು. ಇಂದಿರಾ ಕ್ಯಾಂಟಿನ್ ತೆರೆಯದಿರಲು ನಿರ್ಧಾರ ಮಾಡಿದ್ದೇವೆ. ಜನಸಂದಣಿ ಹೆಚ್ಚುವ ಭೀತಿಯಿಂದ ಈ ನಿರ್ಧಾರಕ್ಕೆ ಬಂದಿದ್ದೇವೆ. ಜನ ಸರ್ಕಾರದ ಜತೆ ಸಹಕರಿಸಬೇಕು. ನಿಯಮ ಉಲ್ಲಂಘಿಸಿದರೆ ಪೊಲೀಸರು ಕಠಿಣ ಕ್ರಮ ಜರುಗಿಸಲಿದ್ದಾರೆ. ಇದು ಅನಿವಾರ್ಯ,’ ಎಂದರು.