ಪರೀಕ್ಷೆ ನಡೆಸುವುದರಿಂದ ಸೋಂಕು ಇನ್ನಷ್ಟು ಪಸರಿಸುವ ಸಾಧ್ಯತೆ ಇದೆ. ಸೋಂಕು ಹರಡುವುದನ್ನು ನಿಯಂತ್ರಿಸಲು ಇಷ್ಟು ದಿನ ಕೈಗೊಂಡ ಕ್ರಮಗಳೆಲ್ಲವೂ ಮಣ್ಣುಪಾಲಾಗುವ ಸಂಭವವಿದೆ. ಜನವಸತಿ ಪ್ರದೇಶದಲ್ಲಿ ಪರೀಕ್ಷಾ ಕೇಂದ್ರ ತೆರೆಯುವುದಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಬಹುದು. ಶಿಕ್ಷಣ ಸಚಿವರು ತಜ್ಞರೊಂದಿಗೆ ಚರ್ಚಿಸಿ ಯೋಗ್ಯ ನಿರ್ಧಾರ ಕೈಗೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.