ಹೊನ್ನಾವರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಶಿಕ್ಷಕರನ್ನು ಈ ಅವಧಿಯಲ್ಲಿ ಯಾವುದೇ ತರಬೇತಿಗಳಿಗೆ ನಿಯುಕ್ತಿ ಮಾಡದಂತೆ ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಕೇಂದ್ರದವರಿಗೂ ಸೂಚನೆ ನೀಡಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಶಾಲಾ ಅವಧಿಗೆ ತೊಂದರೆ ಆಗದಂತೆ ತರಬೇತಿಯ ವೇಳಾಪಟ್ಟಿ ತಯಾರಿಸುವಂತೆ ತಿಳಿಸಲಾಗಿದೆ. ತಮ್ಮನ್ನು ತರಬೇತಿಗಳಿಗೆ ನಿಯೋಜಿಸಲಾಗುತ್ತಿದೆ ಎಂದು ಶಿಕ್ಷಕರೂ ಬಹಳ ಸಲ ಗಮನಕ್ಕೆ ತಂದಿದ್ದಾರೆ. ಅದಕ್ಕೋಸ್ಕರ ಈ ನಿರ್ಣಯವನ್ನು ತೆಗೆದುಕೊಂಡಿದ್ದೇವೆ’ ಎಂದು ಹೇಳಿದರು.