ಈ ಬಗ್ಗೆ ಪ್ರತಿಕ್ರಿಯಿಸಿದ ಜೆಡಿಎಸ್ನ ಜಿಲ್ಲಾ ಚುನಾವಣಾ ಏಜೆಂಟ್, ವಕೀಲ ಮಳಲಿ ಜಯರಾಂ, ‘ಈ ಆರೋಪ ರಾಜಕೀಯ ದುರುದ್ದೇಶವಷ್ಟೆ. ಈಗಾಗಲೇ ಚುನಾವಣಾ ಪ್ರಕ್ರಿಯೆ ಮುಗಿದಿದೆ. ಜಿಲ್ಲಾ ಚುನಾವಣಾ ಅಧಿಕಾರಿ ಒಮ್ಮೆ ನಾಮಪತ್ರ ಅಂಗೀಕರಿಸಿದ ಮೇಲೆ ಅದೇ ನಾಮಪತ್ರವನ್ನು ರದ್ದು ಮಾಡಲು ಕಾನೂನಿನಲ್ಲಿ ಅವಕಾಶವೂ ಇಲ್ಲ. ಚುನಾವಣೆ ಪ್ರಕ್ರಿಯೆ ಮುಗಿದ ಬಳಿಕ, ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಬಹುದು’ ಎಂದರು.