ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು ಎಂಬ ಮಾತಿದೆ. ಹಾಗೆಯೇ ಸಿದ್ದರಾಮಯ್ಯ ಅವರು ಬಿಜೆಪಿ ಹೊಗಳಲು ಸಾಧ್ಯವಿಲ್ಲ. ಅವರು ಬಿಜೆಪಿಗೆ ಬಂದಾಗಷ್ಟೇ ಹೊಗಳಬಹುದು. ಕಾಂಗ್ರೆಸ್ ನಲ್ಲಿ ಇರುವಾಗ ಹೊಗಳಿದರೆ ಅವರ ರಾಜಕೀಯ ಅಧಿಕಾರಕ್ಕೆ ಧಕ್ಕೆ ಬರುತ್ತದೆ. ಆ ಸತ್ಯ ಅವರಿಗೂ ಗೊತ್ತಿದೆ. ಬಿಜೆಪಿಗೆ ಬಂದಾಗ ಖಂಡಿತಾ ಹೊಗಳುತ್ತಾರೆ ಎಂದು ಪ್ರತಿಕ್ರಿಯಿಸಿದರು.