ತಾಲ್ಲೂಕಿನ ಮಂಡಿಕಲ್ಲು ಗ್ರಾಮದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನೆರೆ ಸಂತ್ರಸ್ತರಿಗೆ ಏನೂ ಕಡಿಮೆ ಮಾಡಿಲ್ಲ. ಅನುದಾನ ಬಿಡುಗಡೆಯಾಗಿದೆ. ಕೆಲಸ ಕಾರ್ಯಗಳು ನಡೆಯುತ್ತಿವೆ. ಪಕ್ಷಪಾತವಿಲ್ಲದೆ ಯಡಿಯೂರಪ್ಪನವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ವಿರೋಧ ಪಕ್ಷದವರ ಆರೋಪ ಒಪ್ಪುವುದಿಲ್ಲ’ ಎಂದು ಹೇಳಿದರು.