ಈ ದೂರಿನ ಮೇರೆಗೆ ಸೂಕ್ತ ಕ್ರಮ ಜರುಗಿಸುವಂತೆ ಕೇಂದ್ರ ಚುನಾವಣಾ ಆಯೋಗ ಜಿಲ್ಲಾಡಳಿತಕ್ಕೆ ನಿರ್ದೇಶಿಸಿತ್ತು. ಅದರ ಅನ್ವಯ ಆಳ್ವಾ ಅವರಿಗೆ ನೋಟಿಸ್ ಜಾರಿ ಮಾಡಿರುವ ಜಿಲ್ಲಾಡಳಿತ, ವೈಯಕ್ತಿ ಆರೋಪದ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದು, ಇದಕ್ಕಾಗಿ ತಮ್ಮ ವಿರುದ್ಧ ಏಕೆ ಕ್ರಮ ಜರುಗಿಸಬಾರದು ಎಂಬುದಕ್ಕೆ ವಿವರಣೆ ಕೇಳಿದೆ.