ಆಕ್ಷೇಪಣೆ ಏನು?: ‘ಯಲ್ಲಾಪುರ, ಹಿರೇಕೆರೂರು, ರಾಣೆಬೆನ್ನೂರು, ಚಿಕ್ಕಬಳ್ಳಾಪುರ, ಹೊಸಕೋಟೆ ಮತ್ತು ಕೆ.ಆರ್.ಪೇಟೆಗಳಲ್ಲಿ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ ಮಾಡಿದ್ದರೆ ಅಥಣಿ, ಕಾಗವಾಡ, ಗೋಕಾಕ, ವಿಜಯನಗರ, ಕೆ.ಆರ್.ಪುರ, ಯಶವಂತಪುರ, ಮಹಾಲಕ್ಷ್ಮಿ ಲೇ ಔಟ್, ಶಿವಾಜಿನಗರ ಮತ್ತು ಹುಣಸೂರು ಕ್ಷೇತ್ರಗಳಲ್ಲಿ ಆಯಾ ವಿಧಾನಸಭಾ ಕ್ಷೇತ್ರಗಳಿಗೆ ಮಾತ್ರವೇ ಅನ್ವಯವಾಗುವಂತೆ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ’ ಎಂಬುದು ಅರ್ಜಿದಾರರ ಆಕ್ಷೇಪ.