ಕರ್ನಾಟಕದಲ್ಲೂ ಎನ್ಪಿಎಸ್ ನೌಕರರ ಸಂಘ ಈ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯಮಟ್ಟದಲ್ಲಿ ಹೋರಾಟ ನಡೆಸಿದೆ. ನೌಕರರ ಸಮ್ಮೇಳನದಲ್ಲಿ ಮಾತನಾಡಿದ್ದ ಕುಮಾರಸ್ವಾಮಿ ಅವರು, ‘ನಮ್ಮ ಸರ್ಕಾರ ನೌಕರರ ಪರವಾಗಿದ್ದು, ಎನ್ಪಿಎಸ್ ರದ್ದುಪಡಿಸುವ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸುತ್ತೇನೆ’ ಎಂದು ಭರವಸೆ ನೀಡಿದ್ದರು.