ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಕಾರ್ಖಾನೆಗಳಿಂದ ಬಾಕಿ ಪಾವತಿಸುವಂತೆ ಹಾಗೂ ಹೆಚ್ಚನ ದರ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅದರ ಕಾವು ರಾಜಧಾನಿ ಬೆಂಗಳೂರಿಗೂ ತಲುಪಿದ್ದು, ಸಿಎಂ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಸಭೆ ನಡೆಸಿದ್ದಾರೆ. ಬಾಕಿ ಪಾವತಿಗೆ 15 ದಿನಗಳ ಗಡುವನ್ನೂ ನೀಡಿದ್ದಾರೆ. ಈ ಬೆಳವಣಿಗೆಗಳ ಬೆನ್ನಲ್ಲೇ ಬಳ್ಳಾರಿ ಜಿಲ್ಲೆಯಲ್ಲಿ ಕಬ್ಬು ದನಗಳ ಮೇವಾಗುತ್ತಿರುವುದು ನೋವಿನ ಸಂಗತಿ.