ಎಂ.ಸಂಜೀವ ಅವರು ವಿವಾಹ ಆಗಿರಲಿಲ್ಲ. ಶಾಲಾ ದಿನಗಳಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದರು. ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟದಲ್ಲಿ ಸಕ್ರಿಯರಾಗಿದ್ದರು. ಅವರನ್ನು ಮೀಸಾ ಕಾಯ್ದೆಯಡಿ ಹಲವು ಬಾರಿ ಬಂಧಿಸಲಾಗಿತ್ತು. ಭೂಸುಧಾರಣಾ ಕಾಯ್ದೆಯ ಜಾರಿ ಕಾಲದಲ್ಲಿ ಬಡವರಿಗೆ ಜಮೀನು ದೊರಕಿಸುವ ಮತ್ತು ಬಾಡಿಗೆದಾರರ ಮೇಲೆ ನಡೆಯುತ್ತಿದ್ದ ದೌರ್ಜನ್ಯದ ವಿರುದ್ಧದ ಹೋರಾಟಗಳಲ್ಲಿ ಸಕ್ರಿಯರಾಗಿದ್ದರು.