‘ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಈ ವಿಷಯವನ್ನು ನನ್ನ ಗಮನಕ್ಕೆ ತಂದರು. ತಕ್ಷಣ ವೆಬ್ಸೈಟ್ನಿಂದ ಈ ಸುತ್ತೋಲೆ ಹಿಂಪಡೆಯಲು ಸೂಚಿಸಿದೆ. ತನಿಖೆಗೂ ಆದೇಶಿಸಿದೆ. ತಪ್ಪು ಎಸಗಿದವರು ಯಾರೆಂಬುದು ಗೊತ್ತಾಗಿದ್ದು, ಅವರನ್ನು ಅಮಾನತುಗೊಳಿಸಲಾಗಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಸ್ಪಷ್ಟಪಡಿಸಿದ್ದಾರೆ.