<p><strong>ಬೆಂಗಳೂರು:</strong>ಶೀಘ್ರವೇ ನನ್ನ ದಿನಚರಿ ಬದಲಾಯಿಸಿಕೊಳ್ಳುತ್ತೇನೆ. ವಾರದಲ್ಲಿ ಒಂದು ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡಿ ಅರ್ಧ ದಿನ ಅಧಿಕಾರಿಗಳು ಹಾಗೂ ಇನ್ನರ್ಧ ದಿನ ರೈತರ ಕಷ್ಟ ಕಾರ್ಪಣ್ಯ ಆಲಿಸುತ್ತೇನೆ....</p>.<p>ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಶನಿವಾರ ಜನತಾ ದರ್ಶನ ಆರಂಭಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಹೀಗೆಂದರು.</p>.<p>‘ನಾನು ಬೆಂಗಳೂರಿನಲ್ಲಿ ಇದ್ದಾಗಲೆಲ್ಲಾ ಪ್ರತಿ ಶನಿವಾರ ತಪ್ಪದೇ ಜನತಾ ದರ್ಶನ ಕಾರ್ಯಕ್ರಮ ನಡೆಸುತ್ತೇನೆ’ ಎಂದರು.</p>.<p>‘ನಾನು ಯಾರಿಗೂ ನಿರಾಸೆ ಉಂಟು ಮಾಡುವುದಿಲ್ಲ. ಈ ತನಕ ಯಾರಿಗೂ ನಿರಾಸೆ ಉಂಟು ಮಾಡಿಯೂ ಇಲ್ಲ ಅದು ರಾತ್ರಿ 11 ಗಂಟೆಯಾದರೂ ಸರಿ, ಒಂದು ಗಂಟೆಯೇ ಆದರೂ ಸರಿ. ಜನರ ಅಹವಾಲು ಆಲಿಸಿಯೇ ತೀರುತ್ತೇನೆ’ ಎಂದರು.</p>.<p><strong>₹138 ಕೋಟಿ ಸಂಗ್ರಹ</strong><br />‘ಕೊಡಗು ಮತ್ತು ಕೇರಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಸಾರ್ಜಜನಿಕರು ಹಾಗೂ ಸಂಘ ಸಂಸ್ಥೆಗಳಿಂದ ಈತನಕಒಟ್ಟು ₹138 ಕೋಟಿ ಸಂಗ್ರಹವಾಗಿದೆ’ ಎಂದರು.</p>.<p><strong>ಪರವಾನಗಿ ಬೇಕು</strong><br />‘ಗ್ರಾಮ ವಾಸ್ತವ್ಯ ನಡೆಸಲು ನನ್ನ ವೈದ್ಯರು ನನಗೆ ಇನ್ನೂ ಅವಕಾಶ ನೀಡಿಲ್ಲ. ಹಾಗಾಗಿ ಗ್ರಾಮ ವಾಸ್ತವ್ಯದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ’ ಎಂದರು.</p>.<p><strong>ನಾಯಿ ದಾಳಿ: ಕುಮಾರಸ್ವಾಮಿ ಅಸಹಾಯಕತೆ</strong><br />‘ಮಕ್ಕಳ ಮೇಲೆ ನಾಯಿಗಳು ದಾಳಿ ಮಾಡಿದ ಸಂದರ್ಭದಲ್ಲಿ ನಾವು ಏನಾದರೂ ಮಾಡಲು ಮುಂದಾದರೆ ಪ್ರಾಣಿ ಪ್ರೀತಿಯ ಜನರು ನಮ್ಮನ್ನು ಪ್ರಶ್ನಿಸುತ್ತಾರೆ ಏನು ಮಾಡುವುದು’ ಎಂದು ಕುಮಾರಸ್ವಾಮಿ ತಮ್ಮ ಅಸಹಾಯಕತೆ ವ್ಯಕ್ತಪಡಿಸಿದರು.<br />ಇತ್ತೀಚೆಗೆ ಬಿಬಿಎಂಪಿ ವ್ಯಾಪ್ತಿಯ ವಿಭೂತಿಪುರದಲ್ಲಿ ನಾಯಿಯೊಂದು ಬಾಲಕನ ಮೇಲೆ ದಾಳಿ ನಡೆಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ವಿಷಯ ಗೊತ್ತಿಲ್ಲ. ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಶೀಘ್ರವೇ ನನ್ನ ದಿನಚರಿ ಬದಲಾಯಿಸಿಕೊಳ್ಳುತ್ತೇನೆ. ವಾರದಲ್ಲಿ ಒಂದು ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡಿ ಅರ್ಧ ದಿನ ಅಧಿಕಾರಿಗಳು ಹಾಗೂ ಇನ್ನರ್ಧ ದಿನ ರೈತರ ಕಷ್ಟ ಕಾರ್ಪಣ್ಯ ಆಲಿಸುತ್ತೇನೆ....</p>.<p>ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಶನಿವಾರ ಜನತಾ ದರ್ಶನ ಆರಂಭಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಹೀಗೆಂದರು.</p>.<p>‘ನಾನು ಬೆಂಗಳೂರಿನಲ್ಲಿ ಇದ್ದಾಗಲೆಲ್ಲಾ ಪ್ರತಿ ಶನಿವಾರ ತಪ್ಪದೇ ಜನತಾ ದರ್ಶನ ಕಾರ್ಯಕ್ರಮ ನಡೆಸುತ್ತೇನೆ’ ಎಂದರು.</p>.<p>‘ನಾನು ಯಾರಿಗೂ ನಿರಾಸೆ ಉಂಟು ಮಾಡುವುದಿಲ್ಲ. ಈ ತನಕ ಯಾರಿಗೂ ನಿರಾಸೆ ಉಂಟು ಮಾಡಿಯೂ ಇಲ್ಲ ಅದು ರಾತ್ರಿ 11 ಗಂಟೆಯಾದರೂ ಸರಿ, ಒಂದು ಗಂಟೆಯೇ ಆದರೂ ಸರಿ. ಜನರ ಅಹವಾಲು ಆಲಿಸಿಯೇ ತೀರುತ್ತೇನೆ’ ಎಂದರು.</p>.<p><strong>₹138 ಕೋಟಿ ಸಂಗ್ರಹ</strong><br />‘ಕೊಡಗು ಮತ್ತು ಕೇರಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಸಾರ್ಜಜನಿಕರು ಹಾಗೂ ಸಂಘ ಸಂಸ್ಥೆಗಳಿಂದ ಈತನಕಒಟ್ಟು ₹138 ಕೋಟಿ ಸಂಗ್ರಹವಾಗಿದೆ’ ಎಂದರು.</p>.<p><strong>ಪರವಾನಗಿ ಬೇಕು</strong><br />‘ಗ್ರಾಮ ವಾಸ್ತವ್ಯ ನಡೆಸಲು ನನ್ನ ವೈದ್ಯರು ನನಗೆ ಇನ್ನೂ ಅವಕಾಶ ನೀಡಿಲ್ಲ. ಹಾಗಾಗಿ ಗ್ರಾಮ ವಾಸ್ತವ್ಯದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ’ ಎಂದರು.</p>.<p><strong>ನಾಯಿ ದಾಳಿ: ಕುಮಾರಸ್ವಾಮಿ ಅಸಹಾಯಕತೆ</strong><br />‘ಮಕ್ಕಳ ಮೇಲೆ ನಾಯಿಗಳು ದಾಳಿ ಮಾಡಿದ ಸಂದರ್ಭದಲ್ಲಿ ನಾವು ಏನಾದರೂ ಮಾಡಲು ಮುಂದಾದರೆ ಪ್ರಾಣಿ ಪ್ರೀತಿಯ ಜನರು ನಮ್ಮನ್ನು ಪ್ರಶ್ನಿಸುತ್ತಾರೆ ಏನು ಮಾಡುವುದು’ ಎಂದು ಕುಮಾರಸ್ವಾಮಿ ತಮ್ಮ ಅಸಹಾಯಕತೆ ವ್ಯಕ್ತಪಡಿಸಿದರು.<br />ಇತ್ತೀಚೆಗೆ ಬಿಬಿಎಂಪಿ ವ್ಯಾಪ್ತಿಯ ವಿಭೂತಿಪುರದಲ್ಲಿ ನಾಯಿಯೊಂದು ಬಾಲಕನ ಮೇಲೆ ದಾಳಿ ನಡೆಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ವಿಷಯ ಗೊತ್ತಿಲ್ಲ. ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>