‘ಒಕ್ಕಲಿಗರ ಪರಿಷತ್, ಅಮೆರಿಕ’ದ ಸಮಾವೇಶವನ್ನು ನ್ಯೂಜೆರ್ಸಿಯಲ್ಲಿ ಅಲ್ಲಿನ ಕಾಲಮಾನ ಬೆಳಿಗ್ಗೆ 11 ಗಂಟೆಗೆ (ಭಾರತೀಯ ಕಾಲಮಾನ ಶುಕ್ರವಾರ ರಾತ್ರಿ 8ಗಂಟೆ) ಉದ್ಘಾಟಿಸಿ ಮಾತನಾಡಿದ ಅವರು,‘ಕರ್ನಾಟಕದಲ್ಲಿ ಪ್ರವಾಸೋದ್ಯಮ, ಶಿಕ್ಷಣ, ಆರೋಗ್ಯ ಪ್ರವಾಸೋದ್ಯಮ, ಸಣ್ಣ ಕೈಗಾರಿಕೆ, ಸಾವಯವ ಕೃಷಿ ಮೊದಲಾದ ಕ್ಷೇತ್ರಗಳಲ್ಲಿ ವಿಪುಲ ಅವಕಾಶಗಳಿವೆ. ಈ ಕ್ಷೇತ್ರಗಳ ಅಗಣಿತ ಸಾಧ್ಯತೆಗಳನ್ನು ಅರಿತುಕೊಂಡು ಅದನ್ನು ಕಾರ್ಯರೂಪಕ್ಕೆ ತರುವ ಇಚ್ಛಾಶಕ್ತಿಯ ಅಗತ್ಯವೂ ಇದೆ. ನಾವೆಲ್ಲ ಸೇರಿ ಎಲ್ಲ ಜಾತಿ ಧರ್ಮ ಶ್ರದ್ಧೆಗಳ ಜನರೂ ಸಾಮರಸ್ಯದಿಂದ ಬದುಕುವ ಒಂದು ಸುಂದರ ತೋಟವಾಗಿ ಕರ್ನಾಟಕವನ್ನು ಕಟ್ಟೋಣ’ ಎಂದರು.