ಸಿ.ಕೆ.ಜಾಫರ್ ಷರೀಫ್ ಕೇಂದ್ರದ ರೈಲ್ವೆ ಸಚಿವರಾಗಿದ್ದಾಗ ಚಿತ್ರದುರ್ಗಕ್ಕೆ ಪ್ರಥಮ ಬಾರಿಗೆ ರೈಲ್ವೆ ಯೋಜನೆ ಮಂಜೂರು ಮಾಡಿದರು. 1982ರಲ್ಲಿ ಚಿತ್ರದುರ್ಗದಿಂದ ರಾಯದುರ್ಗ ರೈಲು ಮಾರ್ಗಕ್ಕೆ ಅವರು ಚಾಲನೆ ನೀಡಿದ್ದರು. 1994ರಲ್ಲಿ ಬಳ್ಳಾರಿ, ರಾಯದುರ್ಗ, ಚಿತ್ರದುರ್ಗ, ಬೆಂಗಳೂರು ಮಾರ್ಗದ ಸುಮಾರು 466 ಕಿ.ಮೀ. ಉದ್ದದ ಹೊಸ ರೈಲು ಮಾರ್ಗಕ್ಕೆ ಚಾಲನೆ ಸಿಕ್ಕಿತ್ತು.