ಇಲ್ಲಿನ ಸೀಬರ್ಡ್ ನೌಕಾನೆಲೆಗೆ ಗುಜರಾತ್ನಿಂದ ಮರಳಿ ಬಂದಿದ್ದ ನೌಕೆಯು ಜಟ್ಟಿಯತ್ತ ಸಾಗುವಾಗಬಾಯ್ಲರ್ ಬಳಿಬೆಂಕಿ ಕಾಣಿಸಿಕೊಂಡಿತು. ಕೂಡಲೇ ಕಾರ್ಯಪ್ರವೃತ್ತರಾದ ಚೌಹಾಣ್ ಮತ್ತು ನೌಕೆಯ ಇತರ ಸಿಬ್ಬಂದಿ, ಬೆಂಕಿಯನ್ನು ನಂದಿಸಿದರು. ಅಷ್ಟರಲ್ಲಿಹೊಗೆಯಿಂದಉಸಿರುಗಟ್ಟಿ ಪ್ರಜ್ಞಾಹೀನರಾದ ಚೌಹಾಣ್ ಅವರನ್ನು ನೌಕಾನೆಲೆಯಲ್ಲಿರುವ ‘ಐಎನ್ಎಸ್ ಪತಂಜಲಿ’ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಗಾಯಗೊಂಡ ಇಬ್ಬರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.