ಸಂಪುಟ ಸಭೆಯ ಪ್ರಮುಖ ತೀರ್ಮಾನಗಳು
* ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಹೆಸರನ್ನು ಬೆಂಗಳೂರು ನಗರ ವಿಶ್ವವಿದ್ಯಾಲಯವಾಗಿ ಬದಲಾವಣೆ
* ಬೆಂಗಳೂರು ವಿಜ್ಞಾನ ಕಾಲೇಜನ್ನು ವಿಶ್ವವಿದ್ಯಾಲಯವಾಗಿ ರೂಪಿಸಲಾಗುವುದು. ಇದಕ್ಕೆ ನೃಪತುಂಗ ವಿಶ್ವವಿದ್ಯಾಲಯ ಎಂದು ಹೆಸರಿಡಲು ನಿರ್ಧಾರ
* ಎಂಟುಜಿಲ್ಲೆಗಳ 47 ತಾಲ್ಲೂಕುಗಳಲ್ಲಿ 1694 ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ, 1307 ಆರೋಗ್ಯ ಉಪಕೇಂದ್ರಗಳನ್ನು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಾಗಿ ಮೇಲ್ದರ್ಜೆಗೆ.
* ರೈತ ಹೋರಾಟ, ಗಣಪತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಾಟೆ ಮತ್ತು ಇತರ ಪ್ರತಿಭಟನೆ ಸಂದರ್ಭದಲ್ಲಿ ದಾಖಲಾಗಿದ್ದ 53 ಪ್ರಕರಣಗಳನ್ನು ಕೈಬಿಡಲು ತೀರ್ಮಾನ
*ಪೊಲೀಸ್ ಇಲಾಖೆಯ ಸಿಪಿಸಿ ಹುದ್ದೆಗಳ ಭರ್ತಿಯಲ್ಲಿ ಸಿಎಆರ್, ಡಿಎಆರ್, ಕೆಎಸ್ಆರ್ಪಿ ಕಾನ್ಸ್ಟೇಬಲ್ಗಳಿಗೆ ಶೇ 10 ರಷ್ಟು ಹುದ್ದೆಗಳು ಮೀಸಲು
* ರಿಯಲ್ ಎಸ್ಟೇಟ್ ಕಾಯ್ದೆಗೆ ತಿದ್ದುಪಡಿ ತಂದು ಇನ್ನು ಮುಂದೆ ಮಾರಾಟ ಒಪ್ಪಂದ ಪತ್ರವನ್ನು ದಾಖಲೆಯಾಗಿ ಪರಿಗಣಿಸಲು ತೀರ್ಮಾನ