<p><strong>ಬೆಂಗಳೂರು: </strong>ರಾಜ್ಯದಲ್ಲಿ ಇನ್ನು ಮುಂದೆ ಮೈಸೂರಿನ ‘ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ’ ಮಾತ್ರ ಕಾರ್ಯನಿರ್ವಹಿಸಲಿದ್ದು, ಉಳಿದ ವಿಶ್ವವಿದ್ಯಾಲಯಗಳು ನಡೆಸುತ್ತಿರುವ ದೂರಶಿಕ್ಷಣ ವಿಭಾಗಗಳ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ಸರ್ಕಾರ ನಿರ್ಧರಿಸಿದೆ.</p>.<p>ರಾಜ್ಯದಲ್ಲಿ ಹಲವು ವಿಶ್ವವಿದ್ಯಾಲಯಗಳು ದೂರ ಶಿಕ್ಷಣ ನೀಡುತ್ತಿವೆ. ಮುಂದೆ ಅವುಗಳಿಗೆ ಅವಕಾಶ ಇರುವುದಿಲ್ಲ. ಈ ಎಲ್ಲ ದೂರ ಶಿಕ್ಷಣ ವಿಭಾಗಗಳು ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲೇ ನೋಂದಾಯಿಸಿಕೊಳ್ಳಬೇಕೆಂದು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.</p>.<p><strong>ಸಂಪುಟ ಸಭೆಯ ಪ್ರಮುಖ ತೀರ್ಮಾನಗಳು</strong><br />* ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಹೆಸರನ್ನು ಬೆಂಗಳೂರು ನಗರ ವಿಶ್ವವಿದ್ಯಾಲಯವಾಗಿ ಬದಲಾವಣೆ<br />* ಬೆಂಗಳೂರು ವಿಜ್ಞಾನ ಕಾಲೇಜನ್ನು ವಿಶ್ವವಿದ್ಯಾಲಯವಾಗಿ ರೂಪಿಸಲಾಗುವುದು. ಇದಕ್ಕೆ ನೃಪತುಂಗ ವಿಶ್ವವಿದ್ಯಾಲಯ ಎಂದು ಹೆಸರಿಡಲು ನಿರ್ಧಾರ<br />* ಎಂಟುಜಿಲ್ಲೆಗಳ 47 ತಾಲ್ಲೂಕುಗಳಲ್ಲಿ 1694 ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ, 1307 ಆರೋಗ್ಯ ಉಪಕೇಂದ್ರಗಳನ್ನು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಾಗಿ ಮೇಲ್ದರ್ಜೆಗೆ.<br />* ರೈತ ಹೋರಾಟ, ಗಣಪತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಾಟೆ ಮತ್ತು ಇತರ ಪ್ರತಿಭಟನೆ ಸಂದರ್ಭದಲ್ಲಿ ದಾಖಲಾಗಿದ್ದ 53 ಪ್ರಕರಣಗಳನ್ನು ಕೈಬಿಡಲು ತೀರ್ಮಾನ<br />*ಪೊಲೀಸ್ ಇಲಾಖೆಯ ಸಿಪಿಸಿ ಹುದ್ದೆಗಳ ಭರ್ತಿಯಲ್ಲಿ ಸಿಎಆರ್, ಡಿಎಆರ್, ಕೆಎಸ್ಆರ್ಪಿ ಕಾನ್ಸ್ಟೇಬಲ್ಗಳಿಗೆ ಶೇ 10 ರಷ್ಟು ಹುದ್ದೆಗಳು ಮೀಸಲು<br />* ರಿಯಲ್ ಎಸ್ಟೇಟ್ ಕಾಯ್ದೆಗೆ ತಿದ್ದುಪಡಿ ತಂದು ಇನ್ನು ಮುಂದೆ ಮಾರಾಟ ಒಪ್ಪಂದ ಪತ್ರವನ್ನು ದಾಖಲೆಯಾಗಿ ಪರಿಗಣಿಸಲು ತೀರ್ಮಾನ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದಲ್ಲಿ ಇನ್ನು ಮುಂದೆ ಮೈಸೂರಿನ ‘ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ’ ಮಾತ್ರ ಕಾರ್ಯನಿರ್ವಹಿಸಲಿದ್ದು, ಉಳಿದ ವಿಶ್ವವಿದ್ಯಾಲಯಗಳು ನಡೆಸುತ್ತಿರುವ ದೂರಶಿಕ್ಷಣ ವಿಭಾಗಗಳ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ಸರ್ಕಾರ ನಿರ್ಧರಿಸಿದೆ.</p>.<p>ರಾಜ್ಯದಲ್ಲಿ ಹಲವು ವಿಶ್ವವಿದ್ಯಾಲಯಗಳು ದೂರ ಶಿಕ್ಷಣ ನೀಡುತ್ತಿವೆ. ಮುಂದೆ ಅವುಗಳಿಗೆ ಅವಕಾಶ ಇರುವುದಿಲ್ಲ. ಈ ಎಲ್ಲ ದೂರ ಶಿಕ್ಷಣ ವಿಭಾಗಗಳು ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲೇ ನೋಂದಾಯಿಸಿಕೊಳ್ಳಬೇಕೆಂದು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.</p>.<p><strong>ಸಂಪುಟ ಸಭೆಯ ಪ್ರಮುಖ ತೀರ್ಮಾನಗಳು</strong><br />* ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಹೆಸರನ್ನು ಬೆಂಗಳೂರು ನಗರ ವಿಶ್ವವಿದ್ಯಾಲಯವಾಗಿ ಬದಲಾವಣೆ<br />* ಬೆಂಗಳೂರು ವಿಜ್ಞಾನ ಕಾಲೇಜನ್ನು ವಿಶ್ವವಿದ್ಯಾಲಯವಾಗಿ ರೂಪಿಸಲಾಗುವುದು. ಇದಕ್ಕೆ ನೃಪತುಂಗ ವಿಶ್ವವಿದ್ಯಾಲಯ ಎಂದು ಹೆಸರಿಡಲು ನಿರ್ಧಾರ<br />* ಎಂಟುಜಿಲ್ಲೆಗಳ 47 ತಾಲ್ಲೂಕುಗಳಲ್ಲಿ 1694 ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ, 1307 ಆರೋಗ್ಯ ಉಪಕೇಂದ್ರಗಳನ್ನು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಾಗಿ ಮೇಲ್ದರ್ಜೆಗೆ.<br />* ರೈತ ಹೋರಾಟ, ಗಣಪತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಗಲಾಟೆ ಮತ್ತು ಇತರ ಪ್ರತಿಭಟನೆ ಸಂದರ್ಭದಲ್ಲಿ ದಾಖಲಾಗಿದ್ದ 53 ಪ್ರಕರಣಗಳನ್ನು ಕೈಬಿಡಲು ತೀರ್ಮಾನ<br />*ಪೊಲೀಸ್ ಇಲಾಖೆಯ ಸಿಪಿಸಿ ಹುದ್ದೆಗಳ ಭರ್ತಿಯಲ್ಲಿ ಸಿಎಆರ್, ಡಿಎಆರ್, ಕೆಎಸ್ಆರ್ಪಿ ಕಾನ್ಸ್ಟೇಬಲ್ಗಳಿಗೆ ಶೇ 10 ರಷ್ಟು ಹುದ್ದೆಗಳು ಮೀಸಲು<br />* ರಿಯಲ್ ಎಸ್ಟೇಟ್ ಕಾಯ್ದೆಗೆ ತಿದ್ದುಪಡಿ ತಂದು ಇನ್ನು ಮುಂದೆ ಮಾರಾಟ ಒಪ್ಪಂದ ಪತ್ರವನ್ನು ದಾಖಲೆಯಾಗಿ ಪರಿಗಣಿಸಲು ತೀರ್ಮಾನ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>