<p><strong>ಬೆಂಗಳೂರು:</strong> ಕಾಂಗ್ರೆಸ್ನವರು ಮತದಾನದಲ್ಲಿ ಭಾಗವಹಿಸಲ್ಲ ಅಂತ ಸಂದೇಶ ಕೊಟ್ಟಿದ್ದರು. ಇದು ಉಪಯೋಗಕ್ಕೆ ಬರಲ್ಲ ಅಂತ ನಾವೂ ಕೂಡ ಭಾಗಿಯಾಗಿಲ್ಲ. ಜಿ.ಟಿ ದೇವೇಗೌಡ ಮತದಾನ ಮಾಡಿದ್ದು ನನಗೆ ಗೊತ್ತಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.</p>.<p>ಈಗ ಅವರು ನಮ್ಮಲ್ಲಿ ಇದ್ದಾರಾ. ಅವರು ಹಲವಾರು ಹೇಳಿಕೆಗಳನ್ನು ಕೊಟ್ಟುಕೊಂಡಿದ್ದಾರೆ. ಇಲ್ಲಿರ್ತಾರೋ, ಎಲ್ಲಿರ್ತಾರೋ ಎಂದು ಕಾದು ನೋಡೋಣ. ಮತದಾನದಲ್ಲಿ ಭಾಗವಹಿಸೋದು ಬೇಡ ಎಂದು ಶಾಸಕಾಂಗ ಸಭೆಯಲ್ಲಿ ತೀರ್ಮಾನ ತೆಗೆದುಕೊಂಡಿದ್ದೇವೆ. ಶಾಸಕಾಂಗ ಪಕ್ಷಕ್ಕೆ ಅಗೌರವ ತೋರುವುದು ಅವರಿಗೆ ಬಿಟ್ಟದ್ದು ಎಂದು ತಿಳಿಸಿದರು.</p>.<p><strong>ಜೆಡಿಎಸ್ನ ಜಿ.ಟಿ. ದೇವೇಗೌಡರಿಂದ ಮಾತ್ರ ಮತದಾನ</strong></p>.<p>ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೊರತುಪಡಿಸಿ ಇತರ ಯಾವ ಶಾಸಕರೂ ವಿಧಾನ ಪರಿಷತ್ ಚುನಾವಣೆಯಲ್ಲಿ ಮತ ಚಲಾಯಿಸಿಲ್ಲ. ಸೋಮವಾರ ಬೆಳಗ್ಗೆ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮತದಾನ ಮಾಡದಿರಲು ನಿರ್ಧರಿಸಲಾಗಿತ್ತು. ಆದರೆ ಶಾಸಕಾಂಗ ಪಕ್ಷದ ನಿರ್ಧಾರವನ್ನು ಧಿಕ್ಕರಿಸಿ ಜಿ.ಟಿ.ದೇವೇಗೌಡರು ಮತ ಚಲಾಯಿಸಿದರು. ಈ ಮಧ್ಯೆ ಉಮೇಶ್ ಕತ್ತಿ, ಬಸನಗೌಡ ಯತ್ನಾಳ ಸಹಿತ ಬಿಜೆಪಿಯ ಬಹುತೇಕ ಎಲ್ಲ ಶಾಸಕರು ಮತ ಚಲಾಯಿಸಿದರು.</p>.<p>ಅನಾರೋಗ್ಯದ ಕಾರಣ ರಾಮದಾಸ್,ಎನ್ ವೈ ಗೋಪಾಲಕೃಷ್ಣಹೊರತುಪಡಿಸಿ, ಇದುವರೆಗೆ 119 ಮಂದಿಪರಿಷತ್ ಉಪಚುನಾವಣೆಯಲ್ಲಿ ಮತದಾನ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಾಂಗ್ರೆಸ್ನವರು ಮತದಾನದಲ್ಲಿ ಭಾಗವಹಿಸಲ್ಲ ಅಂತ ಸಂದೇಶ ಕೊಟ್ಟಿದ್ದರು. ಇದು ಉಪಯೋಗಕ್ಕೆ ಬರಲ್ಲ ಅಂತ ನಾವೂ ಕೂಡ ಭಾಗಿಯಾಗಿಲ್ಲ. ಜಿ.ಟಿ ದೇವೇಗೌಡ ಮತದಾನ ಮಾಡಿದ್ದು ನನಗೆ ಗೊತ್ತಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.</p>.<p>ಈಗ ಅವರು ನಮ್ಮಲ್ಲಿ ಇದ್ದಾರಾ. ಅವರು ಹಲವಾರು ಹೇಳಿಕೆಗಳನ್ನು ಕೊಟ್ಟುಕೊಂಡಿದ್ದಾರೆ. ಇಲ್ಲಿರ್ತಾರೋ, ಎಲ್ಲಿರ್ತಾರೋ ಎಂದು ಕಾದು ನೋಡೋಣ. ಮತದಾನದಲ್ಲಿ ಭಾಗವಹಿಸೋದು ಬೇಡ ಎಂದು ಶಾಸಕಾಂಗ ಸಭೆಯಲ್ಲಿ ತೀರ್ಮಾನ ತೆಗೆದುಕೊಂಡಿದ್ದೇವೆ. ಶಾಸಕಾಂಗ ಪಕ್ಷಕ್ಕೆ ಅಗೌರವ ತೋರುವುದು ಅವರಿಗೆ ಬಿಟ್ಟದ್ದು ಎಂದು ತಿಳಿಸಿದರು.</p>.<p><strong>ಜೆಡಿಎಸ್ನ ಜಿ.ಟಿ. ದೇವೇಗೌಡರಿಂದ ಮಾತ್ರ ಮತದಾನ</strong></p>.<p>ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೊರತುಪಡಿಸಿ ಇತರ ಯಾವ ಶಾಸಕರೂ ವಿಧಾನ ಪರಿಷತ್ ಚುನಾವಣೆಯಲ್ಲಿ ಮತ ಚಲಾಯಿಸಿಲ್ಲ. ಸೋಮವಾರ ಬೆಳಗ್ಗೆ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮತದಾನ ಮಾಡದಿರಲು ನಿರ್ಧರಿಸಲಾಗಿತ್ತು. ಆದರೆ ಶಾಸಕಾಂಗ ಪಕ್ಷದ ನಿರ್ಧಾರವನ್ನು ಧಿಕ್ಕರಿಸಿ ಜಿ.ಟಿ.ದೇವೇಗೌಡರು ಮತ ಚಲಾಯಿಸಿದರು. ಈ ಮಧ್ಯೆ ಉಮೇಶ್ ಕತ್ತಿ, ಬಸನಗೌಡ ಯತ್ನಾಳ ಸಹಿತ ಬಿಜೆಪಿಯ ಬಹುತೇಕ ಎಲ್ಲ ಶಾಸಕರು ಮತ ಚಲಾಯಿಸಿದರು.</p>.<p>ಅನಾರೋಗ್ಯದ ಕಾರಣ ರಾಮದಾಸ್,ಎನ್ ವೈ ಗೋಪಾಲಕೃಷ್ಣಹೊರತುಪಡಿಸಿ, ಇದುವರೆಗೆ 119 ಮಂದಿಪರಿಷತ್ ಉಪಚುನಾವಣೆಯಲ್ಲಿ ಮತದಾನ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>