ಕಳೆದ 15 ದಿನಗಳಿಂದ ರಾಜ್ಯದಲ್ಲಿ ನಡೆದಿದ್ದ ರಾಜಕೀಯ ಬೆಳವಣಿಗೆಗಳು ಬಿಜೆಪಿಗೆ ಪೂರಕವಾಗಿಯೇ ಇದ್ದವು. ಆದರೆ, ಆಡಿಯೊ ಬಹಿರಂಗ ಆಗುತ್ತಿದ್ದಂತೆಯೇ ಪಕ್ಷದ ಮುಖಂಡರ ಲೆಕ್ಕಾಚಾರಗಳೆಲ್ಲ ತಲೆಕೆಳಗಾಗಿವೆ. ಈ ನಕಾರಾತ್ಮಕ ಬೆಳವಣಿಗೆಯು ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆಯೇ ವರಿಷ್ಠರು ಕೆಂಡಾಮಂಡಲ ಆಗಿದ್ದಾರೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.