ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್ನಲ್ಲಿ ಅತೃಪ್ತರು ಯಾರೂ ಇಲ್ಲ. ನಾಲ್ವರು ಶಾಸಕರು ಅತೃಪ್ತರು ಎಂದಲ್ಲ. ಅವರು ಶಾಸಕಾಂಗ ಪಕ್ಷದ ಸಭೆಗೆ ಬಂದಿರಲಿಲ್ಲ. ಹೀಗಾಗಿ ಅನರ್ಹಗೊಳಿಸುವಂತೆ ವಿಧಾನ ಸಭಾಧ್ಯಕ್ಷರಿಗೆ ಮನವಿ ಕೊಟ್ಟಿದ್ದೆವು. ಈಗ ಅವರು ನಮ್ಮನ್ನು ಭೇಟಿಯಾಗಿದ್ದಾರೆ. ನಾವು ಕೊಟ್ಟಿರುವ ಮನವಿಯ ಬಗ್ಗೆಸಭಾಧ್ಯಕ್ಷರು ಇನ್ನೂ ನಿರ್ಧಾರ ಕೈಗೊಂಡಿಲ್ಲ’ ಎಂದರು.