ಕಾನೂನುಬಾಹಿರ ಚಟುವಟಿಕೆ (ತಡೆ) ಕಾಯ್ದೆಯ (ಯುಎಪಿಎ) ತಿದ್ದುಪಡಿ ಮಸೂದೆಯ ಬಗ್ಗೆ ಲೋಕಸಭೆಯಲ್ಲಿ ನಡೆದ ಚರ್ಚೆಗಳಿಗೆ ಉತ್ತರಿಸಿದ ಶಾ, ‘ಈ ಕಾಯ್ದೆಯನ್ನು ಭಯೋತ್ಪಾದನೆಯ ಮೂಲೋತ್ಪಾಟನೆಗೆ ಮಾತ್ರ ಬಳಸಲಾಗುವುದು.ಅದರ ದುರ್ಬಳಕೆ ಆಗುವುದಿಲ್ಲ ಎಂದು ಭರವಸೆ ನೀಡುತ್ತೇವೆ. ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತುಹಾಕಬೇಕಾದರೆ, ಭಯೋತ್ಪಾದನಾ ಸಂಸ್ಥೆಗಳ ಜೊತೆ ಸಂಬಂಧ ಇಟ್ಟುಕೊಂಡ ವ್ಯಕ್ತಿಯನ್ನು ‘ಭಯೋತ್ಪಾದಕ’ ಎಂದು ಘೋಷಿಸಲು ಕಾನೂನಿನಲ್ಲಿ ಅವಕಾಶ ಇರುವುದು ಅಗತ್ಯ ಎಂದರು.