‘ಬಿಜೆಪಿಯವರು ಜನಜಾಗೃತಿ ಅಭಿಯಾನ ನಡೆಸುತ್ತಿದ್ದಾಗ, ಸ್ಥಳೀಯ ಯುವಕರು ವಿರೋಧ ವ್ಯಕ್ತಪಡಿಸಿದರು. ಆದರೆ, ಮಾರ್ಗದುದ್ದಕ್ಕೂ ಬಿಜೆಪಿಯವರೊಂದಿಗೆ ಹೆಜ್ಜೆ ಹಾಕಿ, ಘೋಷಣೆ ಕೂಗಿ ಅವರನ್ನು ಪ್ರಚೋದಿಸುತ್ತಿದ್ದರು. ಇದೇ ವೇಳೆ ನೂಕಾಟ, ತಳ್ಳಾಟ ಉಂಟಾಗಿದ್ದರಿಂದ ಪರಿಸ್ಥಿತಿ ನಿಭಾಯಿಸಲು ಲಘು ಲಾಠಿ ಪ್ರಹಾರ ಮಾಡಬೇಕಾಯಿತು. ಪ್ರಚೋದಿಸುತ್ತಿದ್ದ ಮೂವರನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಡಿ.ವೈ.ಎಸ್ಪಿ. ವಿ. ರಘುಕುಮಾರ ‘ಪ್ರಜಾವಾಣಿ‘ಗೆ ತಿಳಿಸಿದರು.