ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರದೇಶ ಕಾಂಗ್ರೆಸ್ ಮಾಧ್ಯಮ ವಿಭಾಗದ ಮುಖ್ಯಸ್ಥ ವಿ.ಎಸ್. ಉಗ್ರಪ್ಪ,‘ಮತದಾರರಿಗೆ ಊಟ ಹಾಕಿಸುವುದು, ಉಡುಗೊರೆ ಕೊಡುವುದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ. ಹಾಗಾಗಿ ಚುನಾವಣಾ ಆಯೋಗ ಅದಕ್ಕೆ ಆಸ್ಪದ ಮಾಡಿಕೊಡಬಾರದು. ಈ ಕುರಿತು ಪಕ್ಷದ ವತಿಯಿಂದ ಆಯೋಗಕ್ಕೆ ದೂರು ಸಲ್ಲಿಸಲಾಗುವುದು’ ಎಂದು ಹೇಳಿದರು.