<p><strong>ಬೆಂಗಳೂರು: </strong>ನೌಕರರಿಗೆ ಒಂದು ವರ್ಷದ ಅವಧಿಗೆ ವೇತನರಹಿತ ರಜೆ ಮಂಜೂರು ಮಾಡುವ ಪ್ರಸ್ತಾವನೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ವಿರೋಧ ವ್ಯಕ್ತಪಡಿಸಿದೆ.</p>.<p>‘ನೌಕರರು ಆರ್ಥಿಕವಾಗಿ ಈಗಲೇ ಸಂಕಷ್ಟದಲ್ಲಿದ್ದಾರೆ.ವರ್ಷಗಟ್ಟಲೆ ವೇತನ ಇಲ್ಲದ ಪರಿಸ್ಥಿತಿ ನಿರ್ಮಿಸಿದರೆ ಅವರ ಕುಟುಂಬಗಳನ್ನು ಬೀದಿಗೆ ತಳ್ಳಿದಂತೆ ಆಗಲಿದೆ’ ಎಂದು ಫೆಡರೇಷನ್ ಅಧ್ಯಕ್ಷ ಎಚ್.ಡಿ. ರೇವಪ್ಪ ಹೇಳಿದ್ದಾರೆ.</p>.<p>‘ಕೆಲವೇ ಬಸ್ ಮತ್ತು ಡಿಪೊಗಳಿಂದ ಆರಂಭವಾದ ನಿಗಮವು ಈಗ ದೇಶದಲ್ಲೇ ದೊಡ್ಡಸಂಸ್ಥೆಯಾಗಿ ಬೆಳೆಯಲು ಕಾರ್ಮಿಕರು ಹಗಲು–ರಾತ್ರಿ ಶ್ರಮ ವಹಿಸಿದ್ದೇ ಕಾರಣ. ಅವರನ್ನು ಸಂಕಷ್ಟಕ್ಕೆ ದೂಡಬಾರದು’ ಎಂದು ಒತ್ತಾಯಿಸಿದ್ದಾರೆ.</p>.<p>‘ಕೋವಿಡ್ ಮತ್ತು ರಾಜ್ಯ ಸರ್ಕಾರದ ನೀತಿಗಳಿಂದಾಗಿ ಸಂಸ್ಥೆಗಳು ಈಗ ನಷ್ಟದಲ್ಲಿವೆ. ಈ ಸಂದರ್ಭದಲ್ಲಿ ನಿಗಮಗಳ ಪುನಶ್ಚೇತನಕ್ಕೆ ಪ್ಯಾಕೇಜ್ ಘೋಷಿಸಬೇಕು.ವಿದ್ಯಾರ್ಥಿ ಪಾಸ್ ಹಾಗೂ ಇನ್ನಿತರೆ ರಿಯಾಯಿತಿ ರೂಪದಲ್ಲಿ ಸರ್ಕಾರದಿಂದ ಬರಬೇಕಿರುವಸುಮಾರು ₹2 ಸಾವಿರ ಕೋಟಿಯಷ್ಟು ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನೌಕರರಿಗೆ ಒಂದು ವರ್ಷದ ಅವಧಿಗೆ ವೇತನರಹಿತ ರಜೆ ಮಂಜೂರು ಮಾಡುವ ಪ್ರಸ್ತಾವನೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ವಿರೋಧ ವ್ಯಕ್ತಪಡಿಸಿದೆ.</p>.<p>‘ನೌಕರರು ಆರ್ಥಿಕವಾಗಿ ಈಗಲೇ ಸಂಕಷ್ಟದಲ್ಲಿದ್ದಾರೆ.ವರ್ಷಗಟ್ಟಲೆ ವೇತನ ಇಲ್ಲದ ಪರಿಸ್ಥಿತಿ ನಿರ್ಮಿಸಿದರೆ ಅವರ ಕುಟುಂಬಗಳನ್ನು ಬೀದಿಗೆ ತಳ್ಳಿದಂತೆ ಆಗಲಿದೆ’ ಎಂದು ಫೆಡರೇಷನ್ ಅಧ್ಯಕ್ಷ ಎಚ್.ಡಿ. ರೇವಪ್ಪ ಹೇಳಿದ್ದಾರೆ.</p>.<p>‘ಕೆಲವೇ ಬಸ್ ಮತ್ತು ಡಿಪೊಗಳಿಂದ ಆರಂಭವಾದ ನಿಗಮವು ಈಗ ದೇಶದಲ್ಲೇ ದೊಡ್ಡಸಂಸ್ಥೆಯಾಗಿ ಬೆಳೆಯಲು ಕಾರ್ಮಿಕರು ಹಗಲು–ರಾತ್ರಿ ಶ್ರಮ ವಹಿಸಿದ್ದೇ ಕಾರಣ. ಅವರನ್ನು ಸಂಕಷ್ಟಕ್ಕೆ ದೂಡಬಾರದು’ ಎಂದು ಒತ್ತಾಯಿಸಿದ್ದಾರೆ.</p>.<p>‘ಕೋವಿಡ್ ಮತ್ತು ರಾಜ್ಯ ಸರ್ಕಾರದ ನೀತಿಗಳಿಂದಾಗಿ ಸಂಸ್ಥೆಗಳು ಈಗ ನಷ್ಟದಲ್ಲಿವೆ. ಈ ಸಂದರ್ಭದಲ್ಲಿ ನಿಗಮಗಳ ಪುನಶ್ಚೇತನಕ್ಕೆ ಪ್ಯಾಕೇಜ್ ಘೋಷಿಸಬೇಕು.ವಿದ್ಯಾರ್ಥಿ ಪಾಸ್ ಹಾಗೂ ಇನ್ನಿತರೆ ರಿಯಾಯಿತಿ ರೂಪದಲ್ಲಿ ಸರ್ಕಾರದಿಂದ ಬರಬೇಕಿರುವಸುಮಾರು ₹2 ಸಾವಿರ ಕೋಟಿಯಷ್ಟು ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>