ಕಾಂಗ್ರೆಸ್ನ ಕೆ.ಆರ್.ರಮೇಶ್ ಕುಮಾರ್ ಮಾತನಾಡಿ, ಈ ರೀತಿ ಮಾರಾಟ ಮಾಡಲು ಅವಕಾಶ ನೀಡಿದರೆ, ಜಮೀನನ್ನು ರಿಯಲ್ ಎಸ್ಟೇಟ್ ಉದ್ದೇಶ ಬಳಸಬಹುದು. ತಿದ್ದುಪಡಿ ಮೂಲಕ ಭೂಸುಧಾರಣಾ ಕಾಯ್ದೆಯ ಮೂಲವನ್ನೇ ಅಲುಗಾಡಿಸುವ ಕೆಲಸ ಮಾಡುತ್ತಿದ್ದೀರಿ ಎಂದು ಆತಂಕ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಕಾನೂನು ಸಚಿವ ಮಧುಸ್ವಾಮಿ, 2014 ರಲ್ಲಿ ನಿಮ್ಮದೇ ಸರ್ಕಾರ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ದೇವರಾಜ ಅರಸು ಅವರು ಮಾಡಿದ್ದ ಭೂಸುಧಾರಣೆಯ ಸ್ವರೂಪವನ್ನೇ ನಾಶ ಮಾಡಿದಿರಿ ಎಂದು ದೂರಿದರು.