<p><strong>ಬೆಂಗಳೂರು:</strong> ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಇದೇ 30 ಮತ್ತು 31ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಲಿದ್ದು, ಎರಡೂ ದಿನಗಳ ಕಾಲ 'ಆರೆಂಜ್ ಅಲರ್ಟ್' ಘೋಷಿಸಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.</p>.<p>ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಹಾಸನ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದ್ದು,'ಯೆಲ್ಲೊ ಅಲರ್ಟ್' ಘೋಷಿಸಿದೆ. ಜೂನ್ 1ರಿಂದ ಕರಾವಳಿಯಲ್ಲಿ ಹೆಚ್ಚು ಮಳೆಯಾಗಲಿದೆ. ಉತ್ತರ ಒಳನಾಡಿನ ಕೆಲವೆಡೆ ಗುಡಗು, ಸಿಡಿಲು ಸಹಿತ ಚದುರಿದಂತೆ ಮಳೆಯಾಗಲಿದೆ.</p>.<p>ಚಾಮರಾಜನಗರಜಿಲ್ಲೆಯ ಯಳಂದೂರಿನಲ್ಲಿ ಶುಕ್ರವಾರ 6 ಸೆಂ.ಮೀ ಮಳೆಯಾಗಿದೆ. ಮಲೆಮಹದೇಶ್ವರ ಬೆಟ್ಟ 4, ಮಾಲೂರು, ಕನಕಪುರ, 3, ಮೈಸೂರು, ಬೇಗೂರು, ಕೃಷ್ಣರಾಜಸಾಗರ 2, ಮಂಡ್ಯ, ಪಾಂಡವಪುರ, ಮಳವಳ್ಳಿ, ಶ್ರೀರಂಗಪಟ್ಟಣ, ಹೊಸಕೋಟೆ, ಬಂಗಾರಪೇಟೆ, ರಾಮನಗರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಕಲಬುರ್ಗಿಯಲ್ಲಿ 42.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.</p>.<p><strong>ಸಿಡಿಲಿಗೆ ಯುವಕ, ಆಡುಗಳು ಸಾವು</strong></p>.<p><strong>ಬೆಂಗಳೂರು: </strong>ಬೀದರ್, ಕಲಬುರ್ಗಿ, ಕೊಡಗು ಜಿಲ್ಲೆಯ ವಿವಿಧೆಡೆ ಮಳೆಯಾಗಿದೆ. ಬೀದರ್ ಜಿಲ್ಲೆಯಲ್ಲಿ ಸಿಡಿಲು ಬಡಿದು ಯುವಕರೊಬ್ಬರು ಸತ್ತಿದ್ದಾರೆ. ಇನ್ನೊಂದು ಪ್ರಕರಣದಲ್ಲಿ 15 ಆಡುಗಳು ಸಿಡಿಲಿಗೆ ಬಲಿಯಾಗಿವೆ.</p>.<p>ಬೀದರ್ ಜಿಲ್ಲೆಯಲ್ಲಿ ಔರಾದ್ ತಾಲ್ಲೂಕಿನ ಹಿಪ್ಪಳಗಾಂವ ಗ್ರಾಮದಲ್ಲಿ ಶುಕ್ರವಾರ ಸಿಡಿಲು ಬಡಿದು ಮಾರುತಿ ಅಶೋಕ ಸಿಂಗೋಡೆ (28) ಸಾವನ್ನಪ್ಪಿದ್ದಾರೆ. ಠಾಣಾಕುಶನೂರ ಸಮೀಪದ ತಾಂಡಾದಲ್ಲಿ ಪ್ರತಾಪ ಆಡೆ ಅವರಿಗೆ ಸೇರಿದ 15 ಆಡುಗಳು ಸಿಡಿಲಿಗೆ ಬಲಿಯಾಗಿವೆ.</p>.<p>ಕಮಲನಗರ, ಔರಾದ್ ಹಾಗೂ ಭಾಲ್ಕಿಯಲ್ಲಿ ಶುಕ್ರವಾರ ಸಾಧಾರಣ ಮಳೆಯಾಗಿದೆ. ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ವೆಂಕಟಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಜೆ 40 ನಿಮಿಷಕ್ಕೂ ಹೆಚ್ಚು ಹೊತ್ತು ಉತ್ತಮ ಮಳೆಯಾಯಿತು.</p>.<p>ಕೊಡಗು ಜಿಲ್ಲೆಯ ಕುಶಾಲನಗರ, ಕೂಡಿಗೆ, ಹೆಬ್ಬಾಲೆಯಲ್ಲಿ ಶುಕ್ರವಾರ ಸಾಧಾರಣ ಮಳೆಯಾಗಿದೆ. ಮೈಸೂರಿನಲ್ಲಿ, ಮಂಡ್ಯ ಜಿಲ್ಲೆಯ ನಾಗಮಂಗಲ, ಚಾಮರಾಜನಗರ ಜಿಲ್ಲೆಯ ಯಳಂದೂರು, ಗುಂಡ್ಲುಪೇಟೆ, ಕೊಳ್ಳೇಗಾಲದಲ್ಲಿ ರಾತ್ರಿ ಬಿರುಸಿನ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಇದೇ 30 ಮತ್ತು 31ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಲಿದ್ದು, ಎರಡೂ ದಿನಗಳ ಕಾಲ 'ಆರೆಂಜ್ ಅಲರ್ಟ್' ಘೋಷಿಸಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.</p>.<p>ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಹಾಸನ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದ್ದು,'ಯೆಲ್ಲೊ ಅಲರ್ಟ್' ಘೋಷಿಸಿದೆ. ಜೂನ್ 1ರಿಂದ ಕರಾವಳಿಯಲ್ಲಿ ಹೆಚ್ಚು ಮಳೆಯಾಗಲಿದೆ. ಉತ್ತರ ಒಳನಾಡಿನ ಕೆಲವೆಡೆ ಗುಡಗು, ಸಿಡಿಲು ಸಹಿತ ಚದುರಿದಂತೆ ಮಳೆಯಾಗಲಿದೆ.</p>.<p>ಚಾಮರಾಜನಗರಜಿಲ್ಲೆಯ ಯಳಂದೂರಿನಲ್ಲಿ ಶುಕ್ರವಾರ 6 ಸೆಂ.ಮೀ ಮಳೆಯಾಗಿದೆ. ಮಲೆಮಹದೇಶ್ವರ ಬೆಟ್ಟ 4, ಮಾಲೂರು, ಕನಕಪುರ, 3, ಮೈಸೂರು, ಬೇಗೂರು, ಕೃಷ್ಣರಾಜಸಾಗರ 2, ಮಂಡ್ಯ, ಪಾಂಡವಪುರ, ಮಳವಳ್ಳಿ, ಶ್ರೀರಂಗಪಟ್ಟಣ, ಹೊಸಕೋಟೆ, ಬಂಗಾರಪೇಟೆ, ರಾಮನಗರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಕಲಬುರ್ಗಿಯಲ್ಲಿ 42.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.</p>.<p><strong>ಸಿಡಿಲಿಗೆ ಯುವಕ, ಆಡುಗಳು ಸಾವು</strong></p>.<p><strong>ಬೆಂಗಳೂರು: </strong>ಬೀದರ್, ಕಲಬುರ್ಗಿ, ಕೊಡಗು ಜಿಲ್ಲೆಯ ವಿವಿಧೆಡೆ ಮಳೆಯಾಗಿದೆ. ಬೀದರ್ ಜಿಲ್ಲೆಯಲ್ಲಿ ಸಿಡಿಲು ಬಡಿದು ಯುವಕರೊಬ್ಬರು ಸತ್ತಿದ್ದಾರೆ. ಇನ್ನೊಂದು ಪ್ರಕರಣದಲ್ಲಿ 15 ಆಡುಗಳು ಸಿಡಿಲಿಗೆ ಬಲಿಯಾಗಿವೆ.</p>.<p>ಬೀದರ್ ಜಿಲ್ಲೆಯಲ್ಲಿ ಔರಾದ್ ತಾಲ್ಲೂಕಿನ ಹಿಪ್ಪಳಗಾಂವ ಗ್ರಾಮದಲ್ಲಿ ಶುಕ್ರವಾರ ಸಿಡಿಲು ಬಡಿದು ಮಾರುತಿ ಅಶೋಕ ಸಿಂಗೋಡೆ (28) ಸಾವನ್ನಪ್ಪಿದ್ದಾರೆ. ಠಾಣಾಕುಶನೂರ ಸಮೀಪದ ತಾಂಡಾದಲ್ಲಿ ಪ್ರತಾಪ ಆಡೆ ಅವರಿಗೆ ಸೇರಿದ 15 ಆಡುಗಳು ಸಿಡಿಲಿಗೆ ಬಲಿಯಾಗಿವೆ.</p>.<p>ಕಮಲನಗರ, ಔರಾದ್ ಹಾಗೂ ಭಾಲ್ಕಿಯಲ್ಲಿ ಶುಕ್ರವಾರ ಸಾಧಾರಣ ಮಳೆಯಾಗಿದೆ. ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ವೆಂಕಟಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಜೆ 40 ನಿಮಿಷಕ್ಕೂ ಹೆಚ್ಚು ಹೊತ್ತು ಉತ್ತಮ ಮಳೆಯಾಯಿತು.</p>.<p>ಕೊಡಗು ಜಿಲ್ಲೆಯ ಕುಶಾಲನಗರ, ಕೂಡಿಗೆ, ಹೆಬ್ಬಾಲೆಯಲ್ಲಿ ಶುಕ್ರವಾರ ಸಾಧಾರಣ ಮಳೆಯಾಗಿದೆ. ಮೈಸೂರಿನಲ್ಲಿ, ಮಂಡ್ಯ ಜಿಲ್ಲೆಯ ನಾಗಮಂಗಲ, ಚಾಮರಾಜನಗರ ಜಿಲ್ಲೆಯ ಯಳಂದೂರು, ಗುಂಡ್ಲುಪೇಟೆ, ಕೊಳ್ಳೇಗಾಲದಲ್ಲಿ ರಾತ್ರಿ ಬಿರುಸಿನ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>